ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ.
ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.
ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.
ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…