ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ.
ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.
ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.
ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…