ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ.
ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.
ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.
ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…