ಮೂಡುಬಿದಿರೆ: ಇಲ್ಲಿನ ಶ್ರೀ ಆದಿಶಕ್ತಿ ಮಹಾಕಾಳಿ ದೇವಸ್ಥಾನದಲ್ಲಿ ಫೆಬ್ರವರಿ 11ರಂದು ನಡೆಯುವ ಸಾನಿಧ್ಯ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಚೇರಿ ಉದ್ಘಾಟನೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು ಮೂಡುಬಿದಿರೆ ಸುತ್ತಮುತ್ತಲಿನ 18 ಗ್ರಾಮಗಳಿಗೆ ಸಂಬಂಧಿಸಿದ ಈ ದೇವಸ್ಥಾನ ಕೇವಲ ಧಾರ್ಮಿಕ ಚಿಂತನೆಯನ್ನು ಮೂಡಿಸುವ ಪೂಜಾ ಕೇಂದ್ರವಾಗಿರದೆ ಶಾಸ್ತ್ರೀಯ ಚೌಕಟ್ಟಿನೊಂದಿಗೆ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿವೆ. ಕೀರ್ತಿಶೇಷರಾದ ಮುಂಡ್ರುದೆಗುತ್ತು ರಾಮ್ ಮೋಹನ್ ರೈ, ಅಮರನಾಥ ಶೆಟ್ಟಿ ಮತ್ತು ಪುತ್ತಿಗೆ ಗುತ್ತು ವಸಂತ ಶೆಟ್ಟಿ ಮತ್ತಿತರ ಪ್ರಮುಖರು ಈ ದೇವಸ್ಥಾನಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬ್ರಹ್ಮಕಲಶೋತ್ಸವವನ್ನು ನಡೆಸಿ ದೇವಸ್ಥಾನದ ಹಿರಿಮೆಯನ್ನು ಮುಂದುವರಿಸೋಣ ಎಂದರು.
ಮಾಜಿ ಸಚಿವ, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ಅಭಯಚಂದ್ರ ಜೈನ್ ಮಾತನಾಡಿ ಆದಿಶಕ್ತಿ ಮಹಾಕಾಳಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ಕೆ.ಶ್ರೀಪತಿ ಭಟ್,ಸಮಿತಿ ಪ್ರಮುಖರಾದ ನಾರಾಯಣ ಪಿ.ಎಂ, ಸುದರ್ಶನ್ ಎಂ., ಚಂದ್ರಶೇಖರ್ ಎಂ, ಮೂಡುಬರ್ಕೆ ಗೀತಾ ಅಂಚನ್ ಮತ್ತಿತರರು ಉಪಸ್ಥಿತರಿದ್ದರು. ಸಮಿತಿ ಪ್ರಧಾನ ಕಾರ್ಯದರ್ಶಿ ತೋಡಾರು ದಿವಾಕರ ಶೆಟ್ಟಿ ನಿರೂಪಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…