ಮುಲ್ಕಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸೌತ್ ಕೆನರಾ ಫೋಟೋಗ್ರಾಫರ್ ಎಸೋಸಿಯೇಷನ್ ಮುಲ್ಕಿ ವಲಯದ ವತಿಯಿಂದ ಮುಲ್ಕಿ ಸೀಮೆ ಅರಸು ಕಂಬಳ ವೈಭವ 2023 ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭ ಸೀಮೆಯ ಅರಮನೆಯಲ್ಲಿ ನಡೆಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ಛಾಯಾಚಿತ್ರ ಪ್ರದರ್ಶನದ ಮೂಲಕ ಗ್ರಾಮೀಣ ಕ್ರೀಡೆಯಾದ ಕಂಬಳಕ್ಕೆ ಪ್ರೋತ್ಸಾಹಿಸಿದ ಎಸ್ಕೆಪಿಎ ಸಂಸ್ಥೆಯ ಕಾರ್ಯ ಅಭಿನಂದನೀಯ ಎಂದರು.
ವೇದಿಕೆಯಲ್ಲಿ ಎಸ್ಕೆಪಿಎ ದ.ಕ ಹಾಗೂ ಉಡುಪಿ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಪ್ರಧಾನ ಕಾರ್ಯದರ್ಶಿ, ದಯಾನಂದ ಬಂಟ್ವಾಳ, ಮುಲ್ಕಿ ವಲಯದ ಅಧ್ಯಕ್ಷ ಪ್ರಕಾಶ್ ಸುವರ್ಣ , ಕಾರ್ಯದರ್ಶಿ ಯೋಗೀಶ್ ಪಾವಂಜೆ,ಜಿಲ್ಲಾ ಉಪ ಕಾರ್ಯದರ್ಶಿ ಹರೀಶ್ ಪಡುಪಣಂಬೂರು, ಮುಲ್ಕಿ ವಲಯ ಕಟ್ಟಡ ಸಮಿತಿ ಸದಸ್ಯ ನವೀನ್ ಚಂದ್ರ, ಎಸ್ ಕೆ ಪಿ ಎನ ಮೋಹನ್ ರಾವ್, ಜೀವನ್ ಪ್ರಕಾಶ್ಕಾಮೆ ರೊಟ್ಟು ಗೌತಮ್ ಜೈನ್ ಮುಲ್ಕಿ ಅರಮನೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರ ವಿವರ-ರಮಾನಂದ ಪೈ ಮಂಗಳೂರು (ಪ್ರ), ರವಿ ಕೋಟ್ಯಾನ್ ಮೂಡಬಿದ್ರೆ (ದ್ವಿ), ಸಾಗರ್ ದೇವಾಡಿಗ ಮಂಗಳೂರು (ತೃ)
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…