ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೂರು ದಶಕಗಳಿಂದ ಸಾರ್ಥಕ ಸೇವೆ – ನಿವೃತ್ತಿ ವೇಳೆ ವಿದ್ಯಾರ್ಥಿಗಳಿಂದ ದೊರೆತ ಉಡುಗೊರೆ ಕಂಡು ಅವಕ್ಕಾದ ಶಿಕ್ಷಕಿ

ಬಂಟ್ವಾಳ: ಮೂರು ದಶಕಗಳಿಂದ ಶಿಕ್ಷಕಿಯಾಗಿ ಸಾರ್ಥಕ ಸೇವೆ ಸಲ್ಲಿಕೆ. ಕಡೆಗೂ ಆ ಶಿಕ್ಷಕಿಗೆ ಸೇವೆಯಿಂದ ನಿವೃತ್ತಿಯಾಗುವ ದಿನ ಬಂದೇ ಬಿಟ್ಟಿತು. ಅದಕ್ಕಾಗಿ ವಿದಾಯ ಕೂಟವೂ ಏರ್ಪಟ್ಟಿತ್ತು. ಈ ವೇಳೆ ಹಳೆ ವಿದ್ಯಾರ್ಥಿಗಳಿಂದ ದೊರಕಿದ ಉಡುಗೊರೆಯನ್ನು ಕಂಡು ಶಿಕ್ಷಕಿಯೇ ಬೆರಗಾದ ಅಪೂರ್ವ ಘಟನೆಯೊಂದು ಬಂಟ್ವಾಳದ ಪಾಣೆಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಹೌದು… ಜಯಲಕ್ಷ್ಮೀ ಆರ್. ಭಟ್, ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. 2020ರಲ್ಲಿ ಅವರು ನಿವೃತ್ತಿಗೊಂಡಿದ್ದರೂ ಶಿಕ್ಷಕರ ಕೊರತೆಯಿಂದ ಅದೇ ಶಾಲೆಯಲ್ಲಿ ವೇತನ ಪಡೆಯದೆ ತಮ್ಮ ಸೇವೆಯನ್ನು ಮುಂದುವರಿಸಿದ್ದರು. ಈ ಮೂಲಕ ಒಟ್ಟು 31 ವರ್ಷಗಳ ಕಾಲ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಪಾಲಿಗೆ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದ ಜಯಲಕ್ಷ್ಮೀ ಆರ್. ಭಟ್ ಈ ಅವಧಿಯಲ್ಲಿ ಸುಮಾರು 2000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಕರಾಗಿ ಮಾರ್ಗದರ್ಶನ ಮಾಡಿದ್ದರು.

ಬೈಟ್: ಜಯಲಕ್ಷ್ಮೀ ಆರ್. ಭಟ್ – ಶಿಕ್ಷಕಿ

ಇದೀಗ ಅವರು ನಿವೃತ್ತಿ ಪಡೆಯುವ ಸಮಯ ಬಂದೇ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕಿಗೆ ವಿದಾಯಕೂಟವೊಂದನ್ನು ಏರ್ಪಡಿಸಿದ್ದರು. ಜೊತೆಗೆ ಅವರಿಗೊಂದು ಮರೆಯಲಾಗದ ಉಡುಗೊರೆ ನೀಡಬೇಕೆಂದು ಉದ್ದೇಶಿಸಿದ್ದರು. ಆದ್ದರಿಂದ ಹಳೆ ವಿದ್ಯಾರ್ಥಿಗಳು ವಾಟ್ಸ್ಆ್ಯಪ್ ಗ್ರೂಪ್‌ನಲ್ಲಿ ಚರ್ಚಿಸಿ ಚಿನ್ನದ ಸರ ನೀಡಲು ನಿರ್ಧರಿಸಿದ್ದರು. ಅದಕ್ಕಾಗಿ ತಮ್ಮೊಳಗೆ ಹಣ ಸಂಗ್ರಹಿಸಿ ಸುಮಾರು 2.10 ಲಕ್ಷ ರೂ. ಮೌಲ್ಯದ 33 ಗ್ರಾಂನ ಬೆಂಡೋಲೆ ಸಹಿತ ಚಿನ್ನದ ನೆಕ್ಲೇಸ್ ಅನ್ನು ಖರೀದಿಸಿ ವಿದಾಯ ಕೂಟದಲ್ಲಿ ಶಿಕ್ಷಕಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಬೈಟ್: ಕಬೀರ್ – ಹಳೆ ವಿದ್ಯಾರ್ಥಿ

ಈ ಉಡುಗೊರೆ ನೀಡುವ ವಿಚಾರವನ್ನು ಶಿಕ್ಷಕಿಗೆ ತಿಳಿಯದಂತೆ ಅತ್ಯಂತ ಗೌಪ್ಯವಾಗಿರಿಸಲಾಗಿದೆ. ಬುಧವಾರ ನಡೆದ ಶಾಲಾ ವಾರ್ಷಿಕೋತ್ಸವದಂದು ಶಿಕ್ಷಕಿಗೆ ಸನ್ಮಾನಿಸಿ ಈ ಉಡುಗೊರೆಯನ್ನು ನೀಡಿದ್ದಾರೆ. ಈ ವೇಳೆ ಆಶ್ಚರ್ಯಕರವೆಂಬಂತೆ ವಿದ್ಯಾರ್ಥಿಗಳಿಂದ ಚಿನ್ನದೊಡವೆ ಉಡುಗೊರೆಯಾಗಿ ದೊರಕಿದ್ದನ್ನು ಕಂಡು ಶಿಕ್ಷಕಿ ಅವಕ್ಕಾಗಿದ್ದಾರೆ. ಒಟ್ಟಿನಲ್ಲಿ ಇಂತಹ ಅಪೂರ್ವ ಕಾರ್ಯಕ್ರಮಕ್ಕೆ ದಾರುಲ್ ಇಸ್ಲಾಂ ಶಾಲೆ ಸಾಕ್ಷಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!