ಬಂಟ್ವಾಳ: ಮೂರು ದಶಕಗಳಿಂದ ಶಿಕ್ಷಕಿಯಾಗಿ ಸಾರ್ಥಕ ಸೇವೆ ಸಲ್ಲಿಕೆ. ಕಡೆಗೂ ಆ ಶಿಕ್ಷಕಿಗೆ ಸೇವೆಯಿಂದ ನಿವೃತ್ತಿಯಾಗುವ ದಿನ ಬಂದೇ ಬಿಟ್ಟಿತು. ಅದಕ್ಕಾಗಿ ವಿದಾಯ ಕೂಟವೂ ಏರ್ಪಟ್ಟಿತ್ತು. ಈ ವೇಳೆ ಹಳೆ ವಿದ್ಯಾರ್ಥಿಗಳಿಂದ ದೊರಕಿದ ಉಡುಗೊರೆಯನ್ನು ಕಂಡು ಶಿಕ್ಷಕಿಯೇ ಬೆರಗಾದ ಅಪೂರ್ವ ಘಟನೆಯೊಂದು ಬಂಟ್ವಾಳದ ಪಾಣೆಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಹೌದು… ಜಯಲಕ್ಷ್ಮೀ ಆರ್. ಭಟ್, ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. 2020ರಲ್ಲಿ ಅವರು ನಿವೃತ್ತಿಗೊಂಡಿದ್ದರೂ ಶಿಕ್ಷಕರ ಕೊರತೆಯಿಂದ ಅದೇ ಶಾಲೆಯಲ್ಲಿ ವೇತನ ಪಡೆಯದೆ ತಮ್ಮ ಸೇವೆಯನ್ನು ಮುಂದುವರಿಸಿದ್ದರು. ಈ ಮೂಲಕ ಒಟ್ಟು 31 ವರ್ಷಗಳ ಕಾಲ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಪಾಲಿಗೆ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದ ಜಯಲಕ್ಷ್ಮೀ ಆರ್. ಭಟ್ ಈ ಅವಧಿಯಲ್ಲಿ ಸುಮಾರು 2000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಕರಾಗಿ ಮಾರ್ಗದರ್ಶನ ಮಾಡಿದ್ದರು.
ಬೈಟ್: ಜಯಲಕ್ಷ್ಮೀ ಆರ್. ಭಟ್ – ಶಿಕ್ಷಕಿ
ಇದೀಗ ಅವರು ನಿವೃತ್ತಿ ಪಡೆಯುವ ಸಮಯ ಬಂದೇ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕಿಗೆ ವಿದಾಯಕೂಟವೊಂದನ್ನು ಏರ್ಪಡಿಸಿದ್ದರು. ಜೊತೆಗೆ ಅವರಿಗೊಂದು ಮರೆಯಲಾಗದ ಉಡುಗೊರೆ ನೀಡಬೇಕೆಂದು ಉದ್ದೇಶಿಸಿದ್ದರು. ಆದ್ದರಿಂದ ಹಳೆ ವಿದ್ಯಾರ್ಥಿಗಳು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಚರ್ಚಿಸಿ ಚಿನ್ನದ ಸರ ನೀಡಲು ನಿರ್ಧರಿಸಿದ್ದರು. ಅದಕ್ಕಾಗಿ ತಮ್ಮೊಳಗೆ ಹಣ ಸಂಗ್ರಹಿಸಿ ಸುಮಾರು 2.10 ಲಕ್ಷ ರೂ. ಮೌಲ್ಯದ 33 ಗ್ರಾಂನ ಬೆಂಡೋಲೆ ಸಹಿತ ಚಿನ್ನದ ನೆಕ್ಲೇಸ್ ಅನ್ನು ಖರೀದಿಸಿ ವಿದಾಯ ಕೂಟದಲ್ಲಿ ಶಿಕ್ಷಕಿಗೆ ಉಡುಗೊರೆಯಾಗಿ ನೀಡಿದ್ದಾರೆ.
ಬೈಟ್: ಕಬೀರ್ – ಹಳೆ ವಿದ್ಯಾರ್ಥಿ
ಈ ಉಡುಗೊರೆ ನೀಡುವ ವಿಚಾರವನ್ನು ಶಿಕ್ಷಕಿಗೆ ತಿಳಿಯದಂತೆ ಅತ್ಯಂತ ಗೌಪ್ಯವಾಗಿರಿಸಲಾಗಿದೆ. ಬುಧವಾರ ನಡೆದ ಶಾಲಾ ವಾರ್ಷಿಕೋತ್ಸವದಂದು ಶಿಕ್ಷಕಿಗೆ ಸನ್ಮಾನಿಸಿ ಈ ಉಡುಗೊರೆಯನ್ನು ನೀಡಿದ್ದಾರೆ. ಈ ವೇಳೆ ಆಶ್ಚರ್ಯಕರವೆಂಬಂತೆ ವಿದ್ಯಾರ್ಥಿಗಳಿಂದ ಚಿನ್ನದೊಡವೆ ಉಡುಗೊರೆಯಾಗಿ ದೊರಕಿದ್ದನ್ನು ಕಂಡು ಶಿಕ್ಷಕಿ ಅವಕ್ಕಾಗಿದ್ದಾರೆ. ಒಟ್ಟಿನಲ್ಲಿ ಇಂತಹ ಅಪೂರ್ವ ಕಾರ್ಯಕ್ರಮಕ್ಕೆ ದಾರುಲ್ ಇಸ್ಲಾಂ ಶಾಲೆ ಸಾಕ್ಷಿಯಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…