ಬಂಟ್ವಾಳ: ಮೂರು ದಶಕಗಳಿಂದ ಶಿಕ್ಷಕಿಯಾಗಿ ಸಾರ್ಥಕ ಸೇವೆ ಸಲ್ಲಿಕೆ. ಕಡೆಗೂ ಆ ಶಿಕ್ಷಕಿಗೆ ಸೇವೆಯಿಂದ ನಿವೃತ್ತಿಯಾಗುವ ದಿನ ಬಂದೇ ಬಿಟ್ಟಿತು. ಅದಕ್ಕಾಗಿ ವಿದಾಯ ಕೂಟವೂ ಏರ್ಪಟ್ಟಿತ್ತು. ಈ ವೇಳೆ ಹಳೆ ವಿದ್ಯಾರ್ಥಿಗಳಿಂದ ದೊರಕಿದ ಉಡುಗೊರೆಯನ್ನು ಕಂಡು ಶಿಕ್ಷಕಿಯೇ ಬೆರಗಾದ ಅಪೂರ್ವ ಘಟನೆಯೊಂದು ಬಂಟ್ವಾಳದ ಪಾಣೆಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಹೌದು… ಜಯಲಕ್ಷ್ಮೀ ಆರ್. ಭಟ್, ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. 2020ರಲ್ಲಿ ಅವರು ನಿವೃತ್ತಿಗೊಂಡಿದ್ದರೂ ಶಿಕ್ಷಕರ ಕೊರತೆಯಿಂದ ಅದೇ ಶಾಲೆಯಲ್ಲಿ ವೇತನ ಪಡೆಯದೆ ತಮ್ಮ ಸೇವೆಯನ್ನು ಮುಂದುವರಿಸಿದ್ದರು. ಈ ಮೂಲಕ ಒಟ್ಟು 31 ವರ್ಷಗಳ ಕಾಲ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಪಾಲಿಗೆ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದ ಜಯಲಕ್ಷ್ಮೀ ಆರ್. ಭಟ್ ಈ ಅವಧಿಯಲ್ಲಿ ಸುಮಾರು 2000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಕರಾಗಿ ಮಾರ್ಗದರ್ಶನ ಮಾಡಿದ್ದರು.
ಬೈಟ್: ಜಯಲಕ್ಷ್ಮೀ ಆರ್. ಭಟ್ – ಶಿಕ್ಷಕಿ
ಇದೀಗ ಅವರು ನಿವೃತ್ತಿ ಪಡೆಯುವ ಸಮಯ ಬಂದೇ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕಿಗೆ ವಿದಾಯಕೂಟವೊಂದನ್ನು ಏರ್ಪಡಿಸಿದ್ದರು. ಜೊತೆಗೆ ಅವರಿಗೊಂದು ಮರೆಯಲಾಗದ ಉಡುಗೊರೆ ನೀಡಬೇಕೆಂದು ಉದ್ದೇಶಿಸಿದ್ದರು. ಆದ್ದರಿಂದ ಹಳೆ ವಿದ್ಯಾರ್ಥಿಗಳು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಚರ್ಚಿಸಿ ಚಿನ್ನದ ಸರ ನೀಡಲು ನಿರ್ಧರಿಸಿದ್ದರು. ಅದಕ್ಕಾಗಿ ತಮ್ಮೊಳಗೆ ಹಣ ಸಂಗ್ರಹಿಸಿ ಸುಮಾರು 2.10 ಲಕ್ಷ ರೂ. ಮೌಲ್ಯದ 33 ಗ್ರಾಂನ ಬೆಂಡೋಲೆ ಸಹಿತ ಚಿನ್ನದ ನೆಕ್ಲೇಸ್ ಅನ್ನು ಖರೀದಿಸಿ ವಿದಾಯ ಕೂಟದಲ್ಲಿ ಶಿಕ್ಷಕಿಗೆ ಉಡುಗೊರೆಯಾಗಿ ನೀಡಿದ್ದಾರೆ.
ಬೈಟ್: ಕಬೀರ್ – ಹಳೆ ವಿದ್ಯಾರ್ಥಿ
ಈ ಉಡುಗೊರೆ ನೀಡುವ ವಿಚಾರವನ್ನು ಶಿಕ್ಷಕಿಗೆ ತಿಳಿಯದಂತೆ ಅತ್ಯಂತ ಗೌಪ್ಯವಾಗಿರಿಸಲಾಗಿದೆ. ಬುಧವಾರ ನಡೆದ ಶಾಲಾ ವಾರ್ಷಿಕೋತ್ಸವದಂದು ಶಿಕ್ಷಕಿಗೆ ಸನ್ಮಾನಿಸಿ ಈ ಉಡುಗೊರೆಯನ್ನು ನೀಡಿದ್ದಾರೆ. ಈ ವೇಳೆ ಆಶ್ಚರ್ಯಕರವೆಂಬಂತೆ ವಿದ್ಯಾರ್ಥಿಗಳಿಂದ ಚಿನ್ನದೊಡವೆ ಉಡುಗೊರೆಯಾಗಿ ದೊರಕಿದ್ದನ್ನು ಕಂಡು ಶಿಕ್ಷಕಿ ಅವಕ್ಕಾಗಿದ್ದಾರೆ. ಒಟ್ಟಿನಲ್ಲಿ ಇಂತಹ ಅಪೂರ್ವ ಕಾರ್ಯಕ್ರಮಕ್ಕೆ ದಾರುಲ್ ಇಸ್ಲಾಂ ಶಾಲೆ ಸಾಕ್ಷಿಯಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…