ಜನ ಮನದ ನಾಡಿ ಮಿಡಿತ

Advertisement

ಜ.23 ರಂದು ತೋಡಾರ್ ಆದರ್ಶ್ ಶಾಲೆಯಲ್ಲಿ ಜಿಲ್ಲಾಮಟ್ಟದ ಅಲ್ ಬಿರ್ ಕಿಡ್ಸ್ ಫೆಸ್ಟ್

ದ.ಕ.ಜಿಲ್ಲೆಯ 14 ಅಲ್ ಬಿರ್ ಶಾಲೆಗಳ ಕಿಡ್ಸ್ ಫೆಸ್ಟ್ ಕಾರ್ಯಕ್ರಮವು ಜ.23 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ ಎಂದು ಕಿಡ್ಸ್ ಫೆಸ್ಟ್ ಕಾರ್ಯಕ್ರಮದ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.


ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಸಹಿತ ಸುಮಾರು ಎರಡು ಸಾವಿರದಷ್ಟು ಜನರು ಸೇರಲಿರುವ ಈ ಕಾರ್ಯಕ್ರಮವನ್ನು ಸಮಸ್ತ ಕೇರಳ ಮುಷಾವರ ಸದಸ್ಯರಾದ ಉಸ್ಮಾನುಲ್ ಫೈಝಿ ಅವರು ಉದ್ಘಾಟಿಸಲಿದ್ದು ಅಂಗರಕರಿಯ ಮಸೀದಿಯ ಖತೀಬರಾದ ಸಯ್ಯದ್ ಅಕ್ರಮ್ ಆಲಿ ತಂಙಳ್ ಅವರು ದುವಾ ಆಶೀರ್ವಚನ ನೀಡಲಿದ್ದಾರೆ.
ಆದರ್ಶ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಮುಹಮ್ಮದ್ ಆಸಿಫ್ ಅವರು ಧ್ವಜಾರೋಹಣ ನೆರವೇರಿಸಲಿದ್ದು ಅಲ್ ಬಿರ್ ನಿರ್ದೇಶಕರಾದ ಕೆ.ಪಿ.ಮುಹಮ್ಮದ್, ಅಲ್ ಬಿರ್ ಜಿಲ್ಲಾ ಸಂಯೋಜಕರಾದ ಶುಕುರ್ ದಾರಿಮಿ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಐ.ಕೆ.ಮೂಸ ದಾರಿಮಿ ಕಕ್ಕಿಂಜೆ,ರಫೀಕ್ ಹುದವಿ ಕೋಲಾರಿ,ಆಸಿಫ್ ಪರಂಪಳ್ಳಿ, ಅಬ್ದುಲ್ ಹಮೀದ್ ಅಸ್ಕಾಫ್, ಎಮ್.ಹೆಚ್.ಮುಹಿಯುದ್ದೀನ್ ಹಾಜಿ, ಅಬ್ದುಲ್ ಲತೀಫ್ ಗುರುಪುರ, ಶಾಫಿ ಮೂಲರಪಟ್ಣ, ಎಮ್.ಎ.ಎಸ್.ಆಸಿಫ್, ರಫೀಕ್ ಮಾಸ್ಟರ್, ಮಯ್ಯದ್ದಿ ಗುಂಡುಕಲ್, ಇಶಾಕ್ ಹಾಜಿ ತೋಡಾರ್ ಸಹಿತ ಹಲವಾರು ಮಂದಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.
ಅಲ್ ಬಿರ್ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ನೀಡಲಾಗುತ್ತಿದ್ದು ರಾಜ್ಯದಲ್ಲಿ ಮೂರು ಸಾವಿರದಷ್ಟು ಶಾಲೆಗಳನ್ನು ಪ್ರಾರಂಭಿಸಲು ಅವಕಾಶ ಸಿಕ್ಕಿದೆ, ಇದು ಮೂರನೇ ಫೆಸ್ಟ್ ಆಗಿದ್ದು ಮೊದಲ ಫೆಸ್ಟ್ ಅಡ್ಡೂರು, ಎರಡನೇ ಫೆಸ್ಟ್ ಉಪ್ಪಿನಂಗಡಿಯಲ್ಲಿ ನಡೆದಿತ್ತೆಂದು ಮಾಹಿತಿ ನೀಡಿದ ಅವರು, ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕಿಡ್ಸ್ ಫೆಸ್ಟ್ ಕಾರ್ಯಕ್ರಮದ ಕಾರ್ಯದರ್ಶಿ ಅಬ್ದುಲ್ ಸಲಾಮ್ ಬೂಟ್ ಬಝಾರ್, ಕೋಶಾಧಿಕಾರಿ ಎಮ್.ಜಿ.ಮುಹಮ್ಮದ್ ಹಾಜಿ ಹಾಗೂ ಅಲ್ ಬಿರ್ ಸಂಯೋಜಕರಾದ ಆರಿಫ್ ಕಮ್ಮಾಜೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

error: Content is protected !!