ದ.ಕ.ಜಿಲ್ಲೆಯ 14 ಅಲ್ ಬಿರ್ ಶಾಲೆಗಳ ಕಿಡ್ಸ್ ಫೆಸ್ಟ್ ಕಾರ್ಯಕ್ರಮವು ಜ.23 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ ಎಂದು ಕಿಡ್ಸ್ ಫೆಸ್ಟ್ ಕಾರ್ಯಕ್ರಮದ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.
ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಸಹಿತ ಸುಮಾರು ಎರಡು ಸಾವಿರದಷ್ಟು ಜನರು ಸೇರಲಿರುವ ಈ ಕಾರ್ಯಕ್ರಮವನ್ನು ಸಮಸ್ತ ಕೇರಳ ಮುಷಾವರ ಸದಸ್ಯರಾದ ಉಸ್ಮಾನುಲ್ ಫೈಝಿ ಅವರು ಉದ್ಘಾಟಿಸಲಿದ್ದು ಅಂಗರಕರಿಯ ಮಸೀದಿಯ ಖತೀಬರಾದ ಸಯ್ಯದ್ ಅಕ್ರಮ್ ಆಲಿ ತಂಙಳ್ ಅವರು ದುವಾ ಆಶೀರ್ವಚನ ನೀಡಲಿದ್ದಾರೆ.
ಆದರ್ಶ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಮುಹಮ್ಮದ್ ಆಸಿಫ್ ಅವರು ಧ್ವಜಾರೋಹಣ ನೆರವೇರಿಸಲಿದ್ದು ಅಲ್ ಬಿರ್ ನಿರ್ದೇಶಕರಾದ ಕೆ.ಪಿ.ಮುಹಮ್ಮದ್, ಅಲ್ ಬಿರ್ ಜಿಲ್ಲಾ ಸಂಯೋಜಕರಾದ ಶುಕುರ್ ದಾರಿಮಿ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಐ.ಕೆ.ಮೂಸ ದಾರಿಮಿ ಕಕ್ಕಿಂಜೆ,ರಫೀಕ್ ಹುದವಿ ಕೋಲಾರಿ,ಆಸಿಫ್ ಪರಂಪಳ್ಳಿ, ಅಬ್ದುಲ್ ಹಮೀದ್ ಅಸ್ಕಾಫ್, ಎಮ್.ಹೆಚ್.ಮುಹಿಯುದ್ದೀನ್ ಹಾಜಿ, ಅಬ್ದುಲ್ ಲತೀಫ್ ಗುರುಪುರ, ಶಾಫಿ ಮೂಲರಪಟ್ಣ, ಎಮ್.ಎ.ಎಸ್.ಆಸಿಫ್, ರಫೀಕ್ ಮಾಸ್ಟರ್, ಮಯ್ಯದ್ದಿ ಗುಂಡುಕಲ್, ಇಶಾಕ್ ಹಾಜಿ ತೋಡಾರ್ ಸಹಿತ ಹಲವಾರು ಮಂದಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.
ಅಲ್ ಬಿರ್ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ನೀಡಲಾಗುತ್ತಿದ್ದು ರಾಜ್ಯದಲ್ಲಿ ಮೂರು ಸಾವಿರದಷ್ಟು ಶಾಲೆಗಳನ್ನು ಪ್ರಾರಂಭಿಸಲು ಅವಕಾಶ ಸಿಕ್ಕಿದೆ, ಇದು ಮೂರನೇ ಫೆಸ್ಟ್ ಆಗಿದ್ದು ಮೊದಲ ಫೆಸ್ಟ್ ಅಡ್ಡೂರು, ಎರಡನೇ ಫೆಸ್ಟ್ ಉಪ್ಪಿನಂಗಡಿಯಲ್ಲಿ ನಡೆದಿತ್ತೆಂದು ಮಾಹಿತಿ ನೀಡಿದ ಅವರು, ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕಿಡ್ಸ್ ಫೆಸ್ಟ್ ಕಾರ್ಯಕ್ರಮದ ಕಾರ್ಯದರ್ಶಿ ಅಬ್ದುಲ್ ಸಲಾಮ್ ಬೂಟ್ ಬಝಾರ್, ಕೋಶಾಧಿಕಾರಿ ಎಮ್.ಜಿ.ಮುಹಮ್ಮದ್ ಹಾಜಿ ಹಾಗೂ ಅಲ್ ಬಿರ್ ಸಂಯೋಜಕರಾದ ಆರಿಫ್ ಕಮ್ಮಾಜೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…