ದ.ಕ.ಜಿಲ್ಲೆಯ 14 ಅಲ್ ಬಿರ್ ಶಾಲೆಗಳ ಕಿಡ್ಸ್ ಫೆಸ್ಟ್ ಕಾರ್ಯಕ್ರಮವು ಜ.23 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ ಎಂದು ಕಿಡ್ಸ್ ಫೆಸ್ಟ್ ಕಾರ್ಯಕ್ರಮದ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.
ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಸಹಿತ ಸುಮಾರು ಎರಡು ಸಾವಿರದಷ್ಟು ಜನರು ಸೇರಲಿರುವ ಈ ಕಾರ್ಯಕ್ರಮವನ್ನು ಸಮಸ್ತ ಕೇರಳ ಮುಷಾವರ ಸದಸ್ಯರಾದ ಉಸ್ಮಾನುಲ್ ಫೈಝಿ ಅವರು ಉದ್ಘಾಟಿಸಲಿದ್ದು ಅಂಗರಕರಿಯ ಮಸೀದಿಯ ಖತೀಬರಾದ ಸಯ್ಯದ್ ಅಕ್ರಮ್ ಆಲಿ ತಂಙಳ್ ಅವರು ದುವಾ ಆಶೀರ್ವಚನ ನೀಡಲಿದ್ದಾರೆ.
ಆದರ್ಶ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಮುಹಮ್ಮದ್ ಆಸಿಫ್ ಅವರು ಧ್ವಜಾರೋಹಣ ನೆರವೇರಿಸಲಿದ್ದು ಅಲ್ ಬಿರ್ ನಿರ್ದೇಶಕರಾದ ಕೆ.ಪಿ.ಮುಹಮ್ಮದ್, ಅಲ್ ಬಿರ್ ಜಿಲ್ಲಾ ಸಂಯೋಜಕರಾದ ಶುಕುರ್ ದಾರಿಮಿ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಐ.ಕೆ.ಮೂಸ ದಾರಿಮಿ ಕಕ್ಕಿಂಜೆ,ರಫೀಕ್ ಹುದವಿ ಕೋಲಾರಿ,ಆಸಿಫ್ ಪರಂಪಳ್ಳಿ, ಅಬ್ದುಲ್ ಹಮೀದ್ ಅಸ್ಕಾಫ್, ಎಮ್.ಹೆಚ್.ಮುಹಿಯುದ್ದೀನ್ ಹಾಜಿ, ಅಬ್ದುಲ್ ಲತೀಫ್ ಗುರುಪುರ, ಶಾಫಿ ಮೂಲರಪಟ್ಣ, ಎಮ್.ಎ.ಎಸ್.ಆಸಿಫ್, ರಫೀಕ್ ಮಾಸ್ಟರ್, ಮಯ್ಯದ್ದಿ ಗುಂಡುಕಲ್, ಇಶಾಕ್ ಹಾಜಿ ತೋಡಾರ್ ಸಹಿತ ಹಲವಾರು ಮಂದಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.
ಅಲ್ ಬಿರ್ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ನೀಡಲಾಗುತ್ತಿದ್ದು ರಾಜ್ಯದಲ್ಲಿ ಮೂರು ಸಾವಿರದಷ್ಟು ಶಾಲೆಗಳನ್ನು ಪ್ರಾರಂಭಿಸಲು ಅವಕಾಶ ಸಿಕ್ಕಿದೆ, ಇದು ಮೂರನೇ ಫೆಸ್ಟ್ ಆಗಿದ್ದು ಮೊದಲ ಫೆಸ್ಟ್ ಅಡ್ಡೂರು, ಎರಡನೇ ಫೆಸ್ಟ್ ಉಪ್ಪಿನಂಗಡಿಯಲ್ಲಿ ನಡೆದಿತ್ತೆಂದು ಮಾಹಿತಿ ನೀಡಿದ ಅವರು, ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕಿಡ್ಸ್ ಫೆಸ್ಟ್ ಕಾರ್ಯಕ್ರಮದ ಕಾರ್ಯದರ್ಶಿ ಅಬ್ದುಲ್ ಸಲಾಮ್ ಬೂಟ್ ಬಝಾರ್, ಕೋಶಾಧಿಕಾರಿ ಎಮ್.ಜಿ.ಮುಹಮ್ಮದ್ ಹಾಜಿ ಹಾಗೂ ಅಲ್ ಬಿರ್ ಸಂಯೋಜಕರಾದ ಆರಿಫ್ ಕಮ್ಮಾಜೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…