ಜನ ಮನದ ನಾಡಿ ಮಿಡಿತ

Advertisement

ಸುಳ್ಯ – ಯಕ್ಷಗಾನ ಕಲಾವಿದ ಕೃಷಿಕ ನಾರಾಯಣ ನಾಯಕ್ ತೋಟಚಾವಡಿ ಆತ್ಮಹತ್ಯೆಗೆ ಶರಣು

ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ರವಿವಾರ ನಡೆದಿದೆ. ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್ ತೋಟಚಾವಡಿ (52) ಎಂದು ಗುರುತಿಸಲಾಗಿದೆ.

ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಅವರು ಇಂದು ಮುಂಜಾನೆ ವೇಳೆ ತುಂಬಾ ಹೊತ್ತು ಮನೆಯಲ್ಲಿ ಬಾಗಿಲು ಹಾಕಿಕೊಂಡಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಮನೆ ಬಳಿ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಇವರಿಗೆ ಇಬ್ಬರು ಪುತ್ರಿಯರಿದ್ದು,ಇಬ್ಬರಿಗೂ ಮದುವೆಯಾಗಿತ್ತು. ಇವರ ಪತ್ನಿ ಮಗಳ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಈ ಕೃತ್ಯವೆಸಗಿದ್ದಾರೆಂದು ತಿಳಿದು ಬಂದಿದೆ.
ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!