ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ ಮಾಡಿದ ಶಾಸಕರು ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ.ಕಳೆದ ಏಳು ವರ್ಷಗಳಿಂದ ಇಲ್ಲಿನವರ ಬೇಡಿಕೆ ಇತ್ತು.
ಊರಿಡೀ ನಾನೇ ಅನುದಾನ ತಂದದ್ದು ಎಂದು ಹೇಳುವವರಿಗೆ ಈ ಪವಿತ್ರ ರಸ್ತೆಯ ಗೋಚರವಾಗಲಿಲ್ಲ ಎಂಬುದು ದುರಂತ. ಈ ರಸ್ತೆಗೆ ಸದ್ಯಕ್ಕೆ 5ಲಕ್ಷ ಅನುದಾನ ನೀಡಿದ್ದೇನೆ ಮುಂದೆ ಇದೇ ರಸ್ತೆಗೆ 15 ಲಕ್ಷ ಅನುದಾನ ನೀಡುವ ಮೂಲಕ ಪೂರ್ತಿಯಾಗಿ ಕಾಂಕ್ರೀಟ್ ಮಾಡುತ್ತೇವೆ ಎಂದು ಹೇಳಿದರು. ಹಿಂದುತ್ವದ ಆಧಾರದಲ್ಲಿ ಮತ ಕೇಳುವವರಿಗೆ ದೇವರು ತೆರಳುವ ರಸ್ತೆ ಮರೆಯಬಾರದಿತ್ತು. ನಮ್ಮದು ಪಕ್ಷಾತೀತ,ಜಾತ್ಯಾತೀತ ವ್ಯವಸ್ಥೆಯಾಗಿದೆ ನಾವು ಎಲ್ಲವನ್ನೂ ಒಂದೇ ದೃಷ್ಟಿಯಲ್ಲಿ ಕಾಣುವ ಮೂಲಕ ರಾಜಧರ್ಮ ಪಾಲನೆ ಮಾಡುತ್ತೇವೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂಬಿ ವಿಶ್ವನಾಥ ರೈ ಮಾತನಾಡಿ ಜನರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಶಾಸಕರು ಜನಪ್ರಿಯತೆಯನ್ನು ಪಡೆಯುತ್ತಿದ್ದು ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಪ್ರಾರಂಭವಾಗಿದೆ. ಎಲ್ಲಾ ಗ್ರಾಮಗಳಿಗೂ ಅನುದಾನವನ್ನು ಮೀಸಲಿಡುವ ಮೂಲಕ ಶಾಸಕರು ಸಮಾನತೆಯನ್ನು ಉಳಿಸಿಕೊಂಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರುಗಾಲದ ಬಾಬು ಶೆಟ್ಡಿ ವೀರಮಂಗಲ, ಹೊನ್ನಪ್ಪ ಪೂಜಾರಿ ಕೈಂದಾಡಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್
ಬೂತ್ ಅಧ್ಯಕ್ಷ ವಸಂತಪೂಜಾರಿ
,ಹಿರಿಯ ಕಾಂಗ್ರೆಸ್ ಮುಖಂಡವೇದನಾಥ ಸುವರ್ಣ, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷರಾದ ಮಹಾಲಿಂಗ ನಾಯ್ಕ್
ಮಂಜುನಾಥ ಶೇಖ, ಗಂಗಾಧರ್ ಶೆಟ್ಟಿ ಎಲಿಕ ,ಜಗದೀಶ್ ಗೌಡ ಎರುಕಡಪ್ಪು, ಲೋಕೇಶ್ ಗೌಡ ಎರುಕಡಪ್ಪು, ಗಣೇಶ್ ದೋಳ, ವಿಜೇತ್ ಗೌಡ ನಾಗರಾಜ್ ದೋಳ,ಮಹಿಳಾ ಕಾಂಗ್ರೆಸ್ ಘಡಕದ ವಿಶಾಲಾಕ್ಷಿ ಬನ್ನೂರು, ನರಿಮೊಗರು ಗ್ರಾಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ಸೇರಿದಂತೆ ಹಲವು ಮಂದಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…