ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ ಮಾಡಿದ ಶಾಸಕರು ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ.ಕಳೆದ ಏಳು ವರ್ಷಗಳಿಂದ ಇಲ್ಲಿನವರ ಬೇಡಿಕೆ ಇತ್ತು.
ಊರಿಡೀ ನಾನೇ ಅನುದಾನ ತಂದದ್ದು ಎಂದು ಹೇಳುವವರಿಗೆ ಈ ಪವಿತ್ರ ರಸ್ತೆಯ ಗೋಚರವಾಗಲಿಲ್ಲ ಎಂಬುದು ದುರಂತ. ಈ ರಸ್ತೆಗೆ ಸದ್ಯಕ್ಕೆ 5ಲಕ್ಷ ಅನುದಾನ ನೀಡಿದ್ದೇನೆ ಮುಂದೆ ಇದೇ ರಸ್ತೆಗೆ 15 ಲಕ್ಷ ಅನುದಾನ ನೀಡುವ ಮೂಲಕ ಪೂರ್ತಿಯಾಗಿ ಕಾಂಕ್ರೀಟ್ ಮಾಡುತ್ತೇವೆ ಎಂದು ಹೇಳಿದರು. ಹಿಂದುತ್ವದ ಆಧಾರದಲ್ಲಿ ಮತ ಕೇಳುವವರಿಗೆ ದೇವರು ತೆರಳುವ ರಸ್ತೆ ಮರೆಯಬಾರದಿತ್ತು. ನಮ್ಮದು ಪಕ್ಷಾತೀತ,ಜಾತ್ಯಾತೀತ ವ್ಯವಸ್ಥೆಯಾಗಿದೆ ನಾವು ಎಲ್ಲವನ್ನೂ ಒಂದೇ ದೃಷ್ಟಿಯಲ್ಲಿ ಕಾಣುವ ಮೂಲಕ ರಾಜಧರ್ಮ ಪಾಲನೆ ಮಾಡುತ್ತೇವೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂಬಿ ವಿಶ್ವನಾಥ ರೈ ಮಾತನಾಡಿ ಜನರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಶಾಸಕರು ಜನಪ್ರಿಯತೆಯನ್ನು ಪಡೆಯುತ್ತಿದ್ದು ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಪ್ರಾರಂಭವಾಗಿದೆ. ಎಲ್ಲಾ ಗ್ರಾಮಗಳಿಗೂ ಅನುದಾನವನ್ನು ಮೀಸಲಿಡುವ ಮೂಲಕ ಶಾಸಕರು ಸಮಾನತೆಯನ್ನು ಉಳಿಸಿಕೊಂಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರುಗಾಲದ ಬಾಬು ಶೆಟ್ಡಿ ವೀರಮಂಗಲ, ಹೊನ್ನಪ್ಪ ಪೂಜಾರಿ ಕೈಂದಾಡಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್
ಬೂತ್ ಅಧ್ಯಕ್ಷ ವಸಂತಪೂಜಾರಿ
,ಹಿರಿಯ ಕಾಂಗ್ರೆಸ್ ಮುಖಂಡವೇದನಾಥ ಸುವರ್ಣ, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷರಾದ ಮಹಾಲಿಂಗ ನಾಯ್ಕ್
ಮಂಜುನಾಥ ಶೇಖ, ಗಂಗಾಧರ್ ಶೆಟ್ಟಿ ಎಲಿಕ ,ಜಗದೀಶ್ ಗೌಡ ಎರುಕಡಪ್ಪು, ಲೋಕೇಶ್ ಗೌಡ ಎರುಕಡಪ್ಪು, ಗಣೇಶ್ ದೋಳ, ವಿಜೇತ್ ಗೌಡ ನಾಗರಾಜ್ ದೋಳ,ಮಹಿಳಾ ಕಾಂಗ್ರೆಸ್ ಘಡಕದ ವಿಶಾಲಾಕ್ಷಿ ಬನ್ನೂರು, ನರಿಮೊಗರು ಗ್ರಾಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ಸೇರಿದಂತೆ ಹಲವು ಮಂದಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…