ಜನ ಮನದ ನಾಡಿ ಮಿಡಿತ

Advertisement

ಶ್ರೀಮಹಮ್ಮಾಯೀ ಭಜನಾ ಮಂಡಳಿ(ರಿ.) ನಾಗವನ,ಕುಂಟ್ರಕಲ ಮಂದಿರದಲ್ಲಿ ‘ರಾಮೋತ್ಸವ’

ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯ ಶ್ರೀ ರಾಮೋತ್ಸವವು ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ಇಲ್ಲಿ ಜರುಗಿತು.

ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಶ್ರೀ ಮಹಮ್ಮಾಯೀ ಮಾತೃ ಮಂಡಳಿ, ಕುಂಟ್ರಕಲ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ ಇದರ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯ ಶ್ರೀ ರಾಮೋತ್ಸವವು ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ಇಲ್ಲಿ ಜರುಗಿತು.
ಈ ಅಭೂತಪೂರ್ವ ಕಾರ್ಯಕ್ರಮದ ಅಂಗವಾಗಿ ಭಜನೆ, ಶ್ರೀ ರಾಮ ತಾರಕ ಮಂತ್ರ ಪಠಣ ಹಾಗೂ ಶ್ರೀ ಹನುಮಾನ್ ಚಾಲೀಸಾ ಪಠಣ ಕಾರ್ಯ ನಡೆಯಿತು.
ಮಂದಿರದ ವಠಾರದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆಯ ನೇರ ಪ್ರಸಾರ ವೀಕ್ಷಣೆಯ ವ್ಯವಸ್ಥೆ ಮಾಡಲಾಗಿತ್ತು.
ದಾನಿಗಳ ಸಹಕಾರದಿಂದ ಮಂದಿರದ ವಠಾರದಲ್ಲಿ ಅಳವಡಿಸಿದ ಅಯೋಧ್ಯೆ ಶ್ರೀ ರಾಮ ಮಂದಿರದ ಭಾವಚಿತ್ರವನ್ನು ಹಿರಿಯರಾದ ಬಾಲಪ್ಪ ನಾಯ್ಕ ಕುಂಟ್ರಕಲ, ಶ್ರೀ ಮಹಾಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ ಇದರ ಅಧ್ಯಕ್ಷರಾದ ತಿಮ್ಮಪ್ಪ ನಾಯ್ಕ ಕಾನ ಹಾಗೂ ಶ್ರೀ ಮಹಮ್ಮಾಯೀ ಮಾತೃ ಮಂಡಳಿ, ಕುಂಟ್ರಕಲ ಇದರ ಅಧ್ಯಕ್ಷರಾದ ರಾಧಿಕಾ ಕುಂಟ್ರಕಲ ಇವರು ಅನಾವರಣಗೊಳಿಸಿದರು.
ಮಧ್ಯಾಹ್ನ ಮಹಾಮಂಗಲಾರತಿಯ ನಂತರ ಅನ್ನಸಂತರ್ಪಣೆ ನಡೆಯಿತು.
ಸಂಜೆ ಸೂರ್ಯಾಸ್ತದ ಸಮಯ ದೀಪ ಹಚ್ಚಿ, ಉತ್ತರ ದಿಕ್ಕಿನಲ್ಲಿರುವ ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ವಿರಾಜಮಾನನಾದ ಬಾಲ ರಾಮನಿಗೆ ಆರತಿ ಎತ್ತಲಾಯ್ತು.
ಈ ವೈಭವಿತವಾದ ಕಾರ್ಯಕ್ರಮದಲ್ಲಿ ಊರ ಪರಊರ ಭಕ್ತಾದಿಗಳು ಪಾಲ್ಗೊಂಡು ಕೃರ್ತರಾದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!