ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯ ಶ್ರೀ ರಾಮೋತ್ಸವವು ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ಇಲ್ಲಿ ಜರುಗಿತು.
ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಶ್ರೀ ಮಹಮ್ಮಾಯೀ ಮಾತೃ ಮಂಡಳಿ, ಕುಂಟ್ರಕಲ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ ಇದರ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯ ಶ್ರೀ ರಾಮೋತ್ಸವವು ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ಇಲ್ಲಿ ಜರುಗಿತು.
ಈ ಅಭೂತಪೂರ್ವ ಕಾರ್ಯಕ್ರಮದ ಅಂಗವಾಗಿ ಭಜನೆ, ಶ್ರೀ ರಾಮ ತಾರಕ ಮಂತ್ರ ಪಠಣ ಹಾಗೂ ಶ್ರೀ ಹನುಮಾನ್ ಚಾಲೀಸಾ ಪಠಣ ಕಾರ್ಯ ನಡೆಯಿತು.
ಮಂದಿರದ ವಠಾರದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆಯ ನೇರ ಪ್ರಸಾರ ವೀಕ್ಷಣೆಯ ವ್ಯವಸ್ಥೆ ಮಾಡಲಾಗಿತ್ತು.
ದಾನಿಗಳ ಸಹಕಾರದಿಂದ ಮಂದಿರದ ವಠಾರದಲ್ಲಿ ಅಳವಡಿಸಿದ ಅಯೋಧ್ಯೆ ಶ್ರೀ ರಾಮ ಮಂದಿರದ ಭಾವಚಿತ್ರವನ್ನು ಹಿರಿಯರಾದ ಬಾಲಪ್ಪ ನಾಯ್ಕ ಕುಂಟ್ರಕಲ, ಶ್ರೀ ಮಹಾಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ ಇದರ ಅಧ್ಯಕ್ಷರಾದ ತಿಮ್ಮಪ್ಪ ನಾಯ್ಕ ಕಾನ ಹಾಗೂ ಶ್ರೀ ಮಹಮ್ಮಾಯೀ ಮಾತೃ ಮಂಡಳಿ, ಕುಂಟ್ರಕಲ ಇದರ ಅಧ್ಯಕ್ಷರಾದ ರಾಧಿಕಾ ಕುಂಟ್ರಕಲ ಇವರು ಅನಾವರಣಗೊಳಿಸಿದರು.
ಮಧ್ಯಾಹ್ನ ಮಹಾಮಂಗಲಾರತಿಯ ನಂತರ ಅನ್ನಸಂತರ್ಪಣೆ ನಡೆಯಿತು.
ಸಂಜೆ ಸೂರ್ಯಾಸ್ತದ ಸಮಯ ದೀಪ ಹಚ್ಚಿ, ಉತ್ತರ ದಿಕ್ಕಿನಲ್ಲಿರುವ ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ವಿರಾಜಮಾನನಾದ ಬಾಲ ರಾಮನಿಗೆ ಆರತಿ ಎತ್ತಲಾಯ್ತು.
ಈ ವೈಭವಿತವಾದ ಕಾರ್ಯಕ್ರಮದಲ್ಲಿ ಊರ ಪರಊರ ಭಕ್ತಾದಿಗಳು ಪಾಲ್ಗೊಂಡು ಕೃರ್ತರಾದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…