ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ; ಸಚಿವ ಶಿವರಾಜ್ ತಂಗಡಗಿ

ಉಡುಪಿ: ರಾಮಮಂದಿರ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ. ನಾವು ಕೂಡ ರಾಮ, ಆಂಜನೇಯರ ಭಕ್ತರೇ ಆಗಿದ್ದೇವೆ. ಆದರೆ ಬಿಜೆಪಿಯವರು ಅದನ್ನು ರಾಜಕೀಯ ಮಾಡುತ್ತಿದ್ದಾರೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದ್ದಾರೆ.


ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮೆಲ್ಲರ ಮನೆಯಲ್ಲೂ ದೇವರ ಕೋಣೆ ಇದೆ. ನಾವು ಪ್ರತಿದಿನ ಪೂಜೆ ಮಾಡಿಯೇ ಹೊರಗಡೆ ಕಾಲಿಡುತ್ತೇವೆ. ಆದರೆ ಬಿಜೆಪಿಯವರು ದೇವರನ್ನು ಬೀದಿಗೆ ತಂದು ಬಿಟ್ಟಿದ್ದಾರೆ. ನಾವು ಬಿಜೆಪಿಯವರ ಹಾಗೆ ದೇವರನ್ನು ಇಟ್ಟು ರಾಜಕಾರಣ ಮಾಡುವುದಿಲ್ಲ. ಅವರಿಗೆ ಅಭಿವೃದ್ಧಿ, ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಬಿಜೆಪಿಯವರು ರಾಮನನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ನಾನು ನಿಶ್ಚಯವಾಗಿಯೂ ಅಯೋಧ್ಯೆ ಹೋಗುತ್ತೇನೆ. ಪ್ರತಿವರ್ಷ ನಾನು ಆಂಜನೇಯನ ಮಾಲೆ ಹಾಕುತ್ತೇನೆ. ಅದನ್ನು ಭಕ್ತಿಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಹಾಕುತ್ತೇನೆಯೇ ಹೊರತು ಬಿಜೆಪಿಯವರ ಹಾಗೆ ಚುನಾವಣೆ ದೃಷ್ಠಿಯಿಂದ ಅಲ್ಲ. ಇವರಿಗೆ ಚುನಾವಣೆ ಬಂದಾಗ ನೆನಪು ಆಗುವುದು ಧರ್ಮ, ಮಸೀದಿ, ಇಲ್ಲದಿದ್ದರೆ ಪಾಕಿಸ್ತಾನ. ಮತ್ತೊಬ್ಬರ ಹೆಗಲ ಮೇಲೆ ಬಂದೂಕು ಇಟ್ಟೇ ಇವರು ಎರಡು ಅವಧಿಗೆ ಆಡಳಿತ ನಡೆಸಿದ್ದಾರೆ ಎಂದು ಅವರು ಟೀಕಿಸಿದರು

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!