ಉಡುಪಿ: ರಾಮಮಂದಿರ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ. ನಾವು ಕೂಡ ರಾಮ, ಆಂಜನೇಯರ ಭಕ್ತರೇ ಆಗಿದ್ದೇವೆ. ಆದರೆ ಬಿಜೆಪಿಯವರು ಅದನ್ನು ರಾಜಕೀಯ ಮಾಡುತ್ತಿದ್ದಾರೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮೆಲ್ಲರ ಮನೆಯಲ್ಲೂ ದೇವರ ಕೋಣೆ ಇದೆ. ನಾವು ಪ್ರತಿದಿನ ಪೂಜೆ ಮಾಡಿಯೇ ಹೊರಗಡೆ ಕಾಲಿಡುತ್ತೇವೆ. ಆದರೆ ಬಿಜೆಪಿಯವರು ದೇವರನ್ನು ಬೀದಿಗೆ ತಂದು ಬಿಟ್ಟಿದ್ದಾರೆ. ನಾವು ಬಿಜೆಪಿಯವರ ಹಾಗೆ ದೇವರನ್ನು ಇಟ್ಟು ರಾಜಕಾರಣ ಮಾಡುವುದಿಲ್ಲ. ಅವರಿಗೆ ಅಭಿವೃದ್ಧಿ, ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಬಿಜೆಪಿಯವರು ರಾಮನನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ನಾನು ನಿಶ್ಚಯವಾಗಿಯೂ ಅಯೋಧ್ಯೆ ಹೋಗುತ್ತೇನೆ. ಪ್ರತಿವರ್ಷ ನಾನು ಆಂಜನೇಯನ ಮಾಲೆ ಹಾಕುತ್ತೇನೆ. ಅದನ್ನು ಭಕ್ತಿಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಹಾಕುತ್ತೇನೆಯೇ ಹೊರತು ಬಿಜೆಪಿಯವರ ಹಾಗೆ ಚುನಾವಣೆ ದೃಷ್ಠಿಯಿಂದ ಅಲ್ಲ. ಇವರಿಗೆ ಚುನಾವಣೆ ಬಂದಾಗ ನೆನಪು ಆಗುವುದು ಧರ್ಮ, ಮಸೀದಿ, ಇಲ್ಲದಿದ್ದರೆ ಪಾಕಿಸ್ತಾನ. ಮತ್ತೊಬ್ಬರ ಹೆಗಲ ಮೇಲೆ ಬಂದೂಕು ಇಟ್ಟೇ ಇವರು ಎರಡು ಅವಧಿಗೆ ಆಡಳಿತ ನಡೆಸಿದ್ದಾರೆ ಎಂದು ಅವರು ಟೀಕಿಸಿದರು
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…