ಇತರೆ

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಹೋರಾತ್ರಿ ಧರಣಿ

ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತರಿಂದ ಆಕ್ರೋಶ
ಉಡುಪಿ: ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಗೊಂಡಿತು.

ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಕೇಂದ್ರ ಸರಕಾರ ವಿರುದ್ಧ ಘೋಷಣೆ ಕೂಗಿದರು. ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ರು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ 31 ಸಾವಿರ ಕನಿಷ್ಠ ವೇತನ ಜಾರಿಗೊಳಿಸಬೇಕು. ಸಾಮಾಜಿಕ ಭದ್ರತೆಗಳಾದ ಇಎಸ್ ಐ, ಪಿಎಫ್, ಪೆನ್ಶನ್, ಎನ್ ಪಿಎಸ್ ಬದಲಿಗೆ ಒಪಿ ಜಾರಿಗೊಳಿಸಬೇಕು. ಐಸಿಡಿಎಸ್ ಕಡಿತ ಮಾಡಿರುವ 8200 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಬಜೆಟ್ ನಲ್ಲಿ ಎಂಡಿಎಂಗೆ ಅನುದಾನ ಹೆಚ್ಚಳ ಹಾಗೂ ಕನಿಷ್ಠ ವೇತನ ಘೋಷಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.
ಸಿಐಟಿಯು ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಕೆ. ಶಂಕರ್, ಸುರೇಶ್ ಕಲ್ಲಗಾರ ಮಾತನಾಡಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ, ಕೋಶಾಧಿಕಾರಿ ಯಶೋಧ ಕೆ., ಜಯಶ್ರೀ ಬೈಂದೂರು, ಜಯಶ್ರೀ ಕಾರ್ಕಳ, ಶೃಂಗಾರಿ ನಾವುಂದ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶೀಲಾವತಿ, ಸಿಐಟಿಯು ಮುಖಂಡರಾದ ಎಚ್. ನರಸಿಂಹ, ಕವಿರಾಜ್ ಎಸ್., ಚಂದ್ರಶೇಖರ್, ಉಮೇಶ್ ಕುಂದರ್ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರಿನಿಂದ  ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆ*0ಕಿ…!

ಬೆಂಗಳೂರಿನಿಂದ  ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿಯಲ್ಲಿ ನಡೆದಿದೆ.…

15 hours ago

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ…!

    ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ.  …

16 hours ago

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ…!

  ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ‌ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ…

16 hours ago

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ…!

  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ…

16 hours ago

ಹುಣಸೂರು: “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ…!

ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ "ಸ್ವಾಸ್ಥ್ಯ ಸ್ವರಾಜ್ - ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ:   ತಾಲ್ಲೂಕಿನ…

17 hours ago

ಬಂಟ್ವಾಳ : ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಮೃತ್ತ್ಯು…!

  ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು…

17 hours ago