ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತರಿಂದ ಆಕ್ರೋಶ
ಉಡುಪಿ: ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಗೊಂಡಿತು.
ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಕೇಂದ್ರ ಸರಕಾರ ವಿರುದ್ಧ ಘೋಷಣೆ ಕೂಗಿದರು. ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ರು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ 31 ಸಾವಿರ ಕನಿಷ್ಠ ವೇತನ ಜಾರಿಗೊಳಿಸಬೇಕು. ಸಾಮಾಜಿಕ ಭದ್ರತೆಗಳಾದ ಇಎಸ್ ಐ, ಪಿಎಫ್, ಪೆನ್ಶನ್, ಎನ್ ಪಿಎಸ್ ಬದಲಿಗೆ ಒಪಿ ಜಾರಿಗೊಳಿಸಬೇಕು. ಐಸಿಡಿಎಸ್ ಕಡಿತ ಮಾಡಿರುವ 8200 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಬಜೆಟ್ ನಲ್ಲಿ ಎಂಡಿಎಂಗೆ ಅನುದಾನ ಹೆಚ್ಚಳ ಹಾಗೂ ಕನಿಷ್ಠ ವೇತನ ಘೋಷಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.
ಸಿಐಟಿಯು ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಕೆ. ಶಂಕರ್, ಸುರೇಶ್ ಕಲ್ಲಗಾರ ಮಾತನಾಡಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ, ಕೋಶಾಧಿಕಾರಿ ಯಶೋಧ ಕೆ., ಜಯಶ್ರೀ ಬೈಂದೂರು, ಜಯಶ್ರೀ ಕಾರ್ಕಳ, ಶೃಂಗಾರಿ ನಾವುಂದ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶೀಲಾವತಿ, ಸಿಐಟಿಯು ಮುಖಂಡರಾದ ಎಚ್. ನರಸಿಂಹ, ಕವಿರಾಜ್ ಎಸ್., ಚಂದ್ರಶೇಖರ್, ಉಮೇಶ್ ಕುಂದರ್ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…