ಕರಾವಳಿ

ಪುಟಾಣಿ ಬಾಲರಾಮರನ್ನು ಕಾಣುವುದೇ ಮನಸ್ಸಿಗೆ ಆನಂದ

ಮಂಗಳೂರು:ಅಯೋಧ್ಯೆಯ ರಾಮ ಮಂದಿರ ಹಿಂದು ಬಾಂಧವರ ಸಾವಿರಾರು ವರ್ಷಗಳ ಕನಸೆಂದರೆ ತಪ್ಪಾಗಲಾರದು. ಆ ಕನಸೊಂದು ಇದೀಗ ನನಸಾಗಿದೆ.1528ರಲ್ಲಿ ಮೊಘಲರು ಕೆಡವಿ ಬಾಬರಿ ಮಸೀದಿಯನ್ನು ನಿರ್ಮಿಸಿದರು. ತದ ನಂತರದ ದಿನಗಳಲ್ಲಿ ಹಲವಾರು ವಿವಾದಗಳು ನಡೆದವು. ಈ ವಿವಾದಗಳ ನಡುವೆ 1992 ರಲ್ಲಿ ಕರಸೇವಕರ ಗುಂಪೊಂದು ಮಸೀದಿಯನ್ನು ಧ್ವಂಸಗೊಳಿಸಿದವು.


ಮುಂದಿನ ಅವಧಿಯಲ್ಲಿ ಭಾರತದ ನೆಲದಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ಹಲವಾರು ತಿಂಗಳುಗಳ ಕಾಲ ಗಲಭೆಗಳು ನಡೆದು ಹಲವಾರು ರಾಮಭಕ್ತರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ದಿನಗಳಾವು.ಸಾವಿರಾರು ವರ್ಷಗಳ ತಪಸ್ಸಿನ ಫಲವಾಗಿಯೋ ಏನೋ 2019 ನವಂಬರ್ 9 ರಂದು ಸುಪ್ರೀಂ ಕೋರ್ಟ್ ವಿವಾದಿತ ರಾಮ ಭೂಮಿಯನ್ನು ಸರ್ಕಾರ ರಚಿಸಿದ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಹಸ್ತಾಂತರಿಸಲು ನಿರ್ಧರಿಸಿತು. ಈ ನಿರ್ಧಾರದನ್ವಯ 2020 ಫೆಬ್ರವರಿ 5 ರಂದು ಈ ಪ್ರದೇಶದಲ್ಲಿ ರಾಮಮಂದಿರವನ್ನು ಕಟ್ಟುವ ಕಾರ್ಯಕ್ಕೆ ತೀರ್ಪು ನೀಡಿತು. ಅದರಂತೆ ಸಾವಿರಾರು ವರ್ಷಗಳ ಕನಸಿನ ರಾಮಮಂದಿರ ಕೊನೆಗೂ ಇಂದು ಲೋಕಾರ್ಪಣೆಗೊಂಡಿದೆ. ಇದರ ಸಂಭ್ರಮವವು ನಾಡಿನ ಎಲ್ಲೆಡೆ ಮನೆ ಮಾತಾಗಿಸಿದೆ ನಾಡಿನ ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣವನ್ನೇ ಸೃಷ್ಟಿಸುವಂತೆ ಮಾಡಿದ ಸುಂದರ ಕ್ಷಣ.


ಈ ನೆನಪಿನ ದಿನವನ್ನು ಪೋಷಕರು, ರಾಮಭಕ್ತರು ತಮ್ಮ ಮಕ್ಕಳಿಗೆ ರಾಮ-ಲಕ್ಷ್ಮಣ, ಸೀತೆ, ಹನುಮಂತರ ವೇಷಭೂಷಣವನ್ನು ಧರಿಸಿ ಮರ್ಯಾದಾಪುರುಷೋತ್ತಮ ಶ್ರೀರಾಮಚಂದ್ರ ತನ್ನ ಅಯೋಧ್ಯೆಯಲ್ಲಿ ಹೇಗೆ ಕಂಗೊಳಿಸುತ್ತಿರುವನೆಂಬ ಊಹೆಯನ್ನು ಮಾಡಿಕೊಂಡು ಅದರಂತೆ ತಮ್ಮ ಮಕ್ಕಳನ್ನು ಸಿದ್ದ ಗೊಳಿಸಿ ಮನೆಯಲ್ಲೇ ರಾಮನನ್ನು ಕಂಡು ಸಂತೋಷ ಪಟ್ಟಿದ್ದಾರೆ.


ಎಲ್ಲಿ ನೋಡಿದರೂ ಪ್ರಭು ಶ್ರೀರಾಮ-ಲಕ್ಷ್ಮಣ, ಸೀತೆ, ಹನುಮಂತರನ್ನು ಹೋಲುವ ಮಕ್ಕಳ ಮುದ್ದಾದ ಭಾವಚಿತ್ರಗಳನ್ನು ಕಾಣುವುದೇ ಕಣ್ಣಿಗೆ ಹಬ್ಬ. ಹೀಗೆ ನಾಡಿನಾದ್ಯಂತ ಎಲ್ಲಾ ರಾಮಭಕ್ತರು ತಮ್ಮ ತಮ್ಮ ಮನೆಯಲ್ಲಿಯೇ ಅಯೋಧ್ಯೆಯ ಶ್ರೀರಾಮಚಂದ್ರನನ್ನು ಕಂಡು ಭಾವುಕರಾಗಿ ತಾವುಗಳೆ ಧನ್ಯೋಸ್ಮಿಗಳೆಂದುಕೊಳ್ಳುತ್ತಿದ್ದಾರೆ. ಈ ದಿನವನ್ನು ದೀಪಾವಳಿ ಹಬ್ಬದ ದಿನದಂತೆ ಮನೆಯಂಗಳದಲ್ಲಿ ದೀಪ ಹಚ್ಚಿ ಸಂಭ್ರಮಿಸಿರುವುದು ಮತ್ತೊಂದು ತರಹದ ಹಬ್ಬ. ಅಯೋಧ್ಯಾ ಶ್ರೀ ರಾಮಮಂದಿರ ಪ್ರತಿಷ್ಠಾಪನಾ ದಿನವು ನಾಡಿನಾದ್ಯಂತ ಕೋಟ್ಯಾಂತರ ಬಾಲರಾಮರ ಮೂಲಕ ಆ ಪ್ರಭು ಶ್ರೀ ರಾಮಚಂದ್ರನನ್ನೇ ನೋಡಿದಷ್ಟು ಉತ್ಸಾಹ, ಸಂತೋಷ ಆನಂದವನ್ನುಂಟು ಮಾಡಿದೆ. ಸಾವಿರಾರು ವರ್ಷಗಳ ಹಿಂದು ಬಾಂಧವರ ಕನಸಿನ ರಾಮಮಂದಿರವನ್ನು ಕಡೆಗೂ ಕಟ್ಟಿಯೇ ಬಿಟ್ಟೆವು ಎಂಬ ಗರ್ವ ರಾಮಭಕ್ತರಲ್ಲಿ , ರಾಮನಲ್ಲಿರುವ ಭಕ್ತಿಯನ್ನು ದೃಡಗೊಳಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

2 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

2 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

2 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

2 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

2 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

2 days ago