ಮಂಗಳೂರು:ಅಯೋಧ್ಯೆಯ ರಾಮ ಮಂದಿರ ಹಿಂದು ಬಾಂಧವರ ಸಾವಿರಾರು ವರ್ಷಗಳ ಕನಸೆಂದರೆ ತಪ್ಪಾಗಲಾರದು. ಆ ಕನಸೊಂದು ಇದೀಗ ನನಸಾಗಿದೆ.1528ರಲ್ಲಿ ಮೊಘಲರು ಕೆಡವಿ ಬಾಬರಿ ಮಸೀದಿಯನ್ನು ನಿರ್ಮಿಸಿದರು. ತದ ನಂತರದ ದಿನಗಳಲ್ಲಿ ಹಲವಾರು ವಿವಾದಗಳು ನಡೆದವು. ಈ ವಿವಾದಗಳ ನಡುವೆ 1992 ರಲ್ಲಿ ಕರಸೇವಕರ ಗುಂಪೊಂದು ಮಸೀದಿಯನ್ನು ಧ್ವಂಸಗೊಳಿಸಿದವು.
ಮುಂದಿನ ಅವಧಿಯಲ್ಲಿ ಭಾರತದ ನೆಲದಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ಹಲವಾರು ತಿಂಗಳುಗಳ ಕಾಲ ಗಲಭೆಗಳು ನಡೆದು ಹಲವಾರು ರಾಮಭಕ್ತರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ದಿನಗಳಾವು.ಸಾವಿರಾರು ವರ್ಷಗಳ ತಪಸ್ಸಿನ ಫಲವಾಗಿಯೋ ಏನೋ 2019 ನವಂಬರ್ 9 ರಂದು ಸುಪ್ರೀಂ ಕೋರ್ಟ್ ವಿವಾದಿತ ರಾಮ ಭೂಮಿಯನ್ನು ಸರ್ಕಾರ ರಚಿಸಿದ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಹಸ್ತಾಂತರಿಸಲು ನಿರ್ಧರಿಸಿತು. ಈ ನಿರ್ಧಾರದನ್ವಯ 2020 ಫೆಬ್ರವರಿ 5 ರಂದು ಈ ಪ್ರದೇಶದಲ್ಲಿ ರಾಮಮಂದಿರವನ್ನು ಕಟ್ಟುವ ಕಾರ್ಯಕ್ಕೆ ತೀರ್ಪು ನೀಡಿತು. ಅದರಂತೆ ಸಾವಿರಾರು ವರ್ಷಗಳ ಕನಸಿನ ರಾಮಮಂದಿರ ಕೊನೆಗೂ ಇಂದು ಲೋಕಾರ್ಪಣೆಗೊಂಡಿದೆ. ಇದರ ಸಂಭ್ರಮವವು ನಾಡಿನ ಎಲ್ಲೆಡೆ ಮನೆ ಮಾತಾಗಿಸಿದೆ ನಾಡಿನ ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣವನ್ನೇ ಸೃಷ್ಟಿಸುವಂತೆ ಮಾಡಿದ ಸುಂದರ ಕ್ಷಣ.
ಈ ನೆನಪಿನ ದಿನವನ್ನು ಪೋಷಕರು, ರಾಮಭಕ್ತರು ತಮ್ಮ ಮಕ್ಕಳಿಗೆ ರಾಮ-ಲಕ್ಷ್ಮಣ, ಸೀತೆ, ಹನುಮಂತರ ವೇಷಭೂಷಣವನ್ನು ಧರಿಸಿ ಮರ್ಯಾದಾಪುರುಷೋತ್ತಮ ಶ್ರೀರಾಮಚಂದ್ರ ತನ್ನ ಅಯೋಧ್ಯೆಯಲ್ಲಿ ಹೇಗೆ ಕಂಗೊಳಿಸುತ್ತಿರುವನೆಂಬ ಊಹೆಯನ್ನು ಮಾಡಿಕೊಂಡು ಅದರಂತೆ ತಮ್ಮ ಮಕ್ಕಳನ್ನು ಸಿದ್ದ ಗೊಳಿಸಿ ಮನೆಯಲ್ಲೇ ರಾಮನನ್ನು ಕಂಡು ಸಂತೋಷ ಪಟ್ಟಿದ್ದಾರೆ.
ಎಲ್ಲಿ ನೋಡಿದರೂ ಪ್ರಭು ಶ್ರೀರಾಮ-ಲಕ್ಷ್ಮಣ, ಸೀತೆ, ಹನುಮಂತರನ್ನು ಹೋಲುವ ಮಕ್ಕಳ ಮುದ್ದಾದ ಭಾವಚಿತ್ರಗಳನ್ನು ಕಾಣುವುದೇ ಕಣ್ಣಿಗೆ ಹಬ್ಬ. ಹೀಗೆ ನಾಡಿನಾದ್ಯಂತ ಎಲ್ಲಾ ರಾಮಭಕ್ತರು ತಮ್ಮ ತಮ್ಮ ಮನೆಯಲ್ಲಿಯೇ ಅಯೋಧ್ಯೆಯ ಶ್ರೀರಾಮಚಂದ್ರನನ್ನು ಕಂಡು ಭಾವುಕರಾಗಿ ತಾವುಗಳೆ ಧನ್ಯೋಸ್ಮಿಗಳೆಂದುಕೊಳ್ಳುತ್ತಿದ್ದಾರೆ. ಈ ದಿನವನ್ನು ದೀಪಾವಳಿ ಹಬ್ಬದ ದಿನದಂತೆ ಮನೆಯಂಗಳದಲ್ಲಿ ದೀಪ ಹಚ್ಚಿ ಸಂಭ್ರಮಿಸಿರುವುದು ಮತ್ತೊಂದು ತರಹದ ಹಬ್ಬ. ಅಯೋಧ್ಯಾ ಶ್ರೀ ರಾಮಮಂದಿರ ಪ್ರತಿಷ್ಠಾಪನಾ ದಿನವು ನಾಡಿನಾದ್ಯಂತ ಕೋಟ್ಯಾಂತರ ಬಾಲರಾಮರ ಮೂಲಕ ಆ ಪ್ರಭು ಶ್ರೀ ರಾಮಚಂದ್ರನನ್ನೇ ನೋಡಿದಷ್ಟು ಉತ್ಸಾಹ, ಸಂತೋಷ ಆನಂದವನ್ನುಂಟು ಮಾಡಿದೆ. ಸಾವಿರಾರು ವರ್ಷಗಳ ಹಿಂದು ಬಾಂಧವರ ಕನಸಿನ ರಾಮಮಂದಿರವನ್ನು ಕಡೆಗೂ ಕಟ್ಟಿಯೇ ಬಿಟ್ಟೆವು ಎಂಬ ಗರ್ವ ರಾಮಭಕ್ತರಲ್ಲಿ , ರಾಮನಲ್ಲಿರುವ ಭಕ್ತಿಯನ್ನು ದೃಡಗೊಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…