“ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು. ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ.ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…