ಉಪ್ಪಿನಂಗಡಿ; ಉದ್ಯೋಗದ ನೆಪದಲ್ಲಿ ಯುವಕನೋರ್ವನಿಗೆ 2.10 ಲಕ್ಷ ರೂ. ವಂಚಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಳಿಯೂರು ಗ್ರಾಮದ ನಿವಾಸಿ ಭವಿತ್ ಕೆ.ಎನ್ (23) ಅವರು ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದ (ಇನ್ಟಾಗ್ರಾಮ್) ಮೂಲಕ ಆರೋಪಿತ ವ್ಯಕ್ತಿ ಪ್ರಜ್ವಲ್ ಪರಿಚಯವಾಗಿದೆ.
ಇವರಿಬ್ಬರು ೨೦೨೩ ರ ಜೂನ್ ೫ ರಂದು ಬೆಂಗಳೂರಿನಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಈ ವೇಳೆ ಪ್ರಜ್ವಲ್ ಮೆರೈನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಈ ಉದ್ಯೋಗಕ್ಕೆ 3 ಲಕ್ಷ ರೂ. ಖರ್ಚಾಗುತ್ತದೆ ಎಂದು ತಿಳಿಸಿದ್ದ. ಬಳಿಕ ಭವಿತ್ ಖಾತೆಯಿಂದ ಜೂ ೧೮ ರಿಂದ ೨೮ ರ ಅವಧಿಯಲ್ಲಿ ಹಂತ-ಹಂತವಾಗಿ, ಒಟ್ಟು 2.10 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿರುತ್ತಾನೆ. ಬಳಿಕ ಪ್ರಜ್ವಲ್, ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ 10 ದಿವಸದೊಳಗೆ ಹಣವನ್ನು ಹಿಂತಿರುಗಿಸುವುದಾಗಿ ನಂಬಿಸಿ, ಈವರೆಗೆ ಕೆಲಸವನ್ನು ಮಾಡಿಕೊಡದೆ, ಪಡೆದಿರುವ ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿದ್ದಾನೆ ಎಂದು ಭವಿತ್ ದೂರಿನಲ್ಲಿ ತಿಳಿಸಿದ್ದಾರೆ.
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…