ಜನ ಮನದ ನಾಡಿ ಮಿಡಿತ

Advertisement

ಅನ್ಯಕೋಮಿನ ಯುವಕನನ್ನ ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರ; ತಂಗಿ , ತಾಯಿಯನ್ನು ಕೆರೆಗೆ ತಳ್ಳಿ ಕೊಲೆ….!!

ಅನ್ಯಕೋಮಿನ ಯುವಕನನ್ನ ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರ ತಂಗಿ ಹಾಗೂ ತನ್ನ ತಾಯಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ.

ಮಗಳು ಧನುಶ್ರೀ (19), ತಾಯಿ ಅನಿತಾ (43) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಗ ನಿತಿನ್​​ನಿಂದ ಈ ಕೃತ್ಯ ನಡೆದಿದೆ. ಸಹೋದರಿ ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಷಯ ಸಹೋದರನಿಗೆ ಗೊತ್ತಾಗಿ ತಿಳಿ ಹೇಳಿದ್ದನು. ಬಳಿಕ ಇಬ್ಬರ ನಡುವೆಯು ವೈಮನಸ್ಸು ಮೂಡಿತ್ತು. ಬಳಿಕ ತಂಗಿ ಮತ್ತು ತಾಯಿಯನ್ನು ಬೈಕ್​ ಮೂಲಕ ಕೆರೆ ಬಳಿಗೆ ಕರೆದುಕೊಂಡು ಹೋಗಿದ್ದಾನೆ. ಆ ಬಳಿಕ ಮೊದಲು ಕೆರೆಯಲ್ಲಿ ತಂಗಿಯನ್ನು ತಳ್ಳಿದ್ದಾನೆ. ಇದರಿಂದ ಗಾಬರಿಗೊಂಡ ತಾಯಿ ತಕ್ಷಣ ಮಗಳನ್ನು ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ತಾಯಿಯನ್ನು ಕೂಡ ಕೆರೆಗೆ ತಳ್ಳಿದ್ದಾನೆ.

ಕೆರೆ ನೀರಿನಲ್ಲಿ ಬಿದ್ದ ತಾಯಿ, ಮಗಳು ಇಬ್ಬರು ಮೃತಪಟ್ಟಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನ ಹೊರ ತೆಗೆದಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!