ಅನ್ಯಕೋಮಿನ ಯುವಕನನ್ನ ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರ ತಂಗಿ ಹಾಗೂ ತನ್ನ ತಾಯಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ.
ಮಗಳು ಧನುಶ್ರೀ (19), ತಾಯಿ ಅನಿತಾ (43) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಗ ನಿತಿನ್ನಿಂದ ಈ ಕೃತ್ಯ ನಡೆದಿದೆ. ಸಹೋದರಿ ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಷಯ ಸಹೋದರನಿಗೆ ಗೊತ್ತಾಗಿ ತಿಳಿ ಹೇಳಿದ್ದನು. ಬಳಿಕ ಇಬ್ಬರ ನಡುವೆಯು ವೈಮನಸ್ಸು ಮೂಡಿತ್ತು. ಬಳಿಕ ತಂಗಿ ಮತ್ತು ತಾಯಿಯನ್ನು ಬೈಕ್ ಮೂಲಕ ಕೆರೆ ಬಳಿಗೆ ಕರೆದುಕೊಂಡು ಹೋಗಿದ್ದಾನೆ. ಆ ಬಳಿಕ ಮೊದಲು ಕೆರೆಯಲ್ಲಿ ತಂಗಿಯನ್ನು ತಳ್ಳಿದ್ದಾನೆ. ಇದರಿಂದ ಗಾಬರಿಗೊಂಡ ತಾಯಿ ತಕ್ಷಣ ಮಗಳನ್ನು ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ತಾಯಿಯನ್ನು ಕೂಡ ಕೆರೆಗೆ ತಳ್ಳಿದ್ದಾನೆ.
ಕೆರೆ ನೀರಿನಲ್ಲಿ ಬಿದ್ದ ತಾಯಿ, ಮಗಳು ಇಬ್ಬರು ಮೃತಪಟ್ಟಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನ ಹೊರ ತೆಗೆದಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…