ಅನ್ಯಕೋಮಿನ ಯುವಕನನ್ನ ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರ ತಂಗಿ ಹಾಗೂ ತನ್ನ ತಾಯಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ.
ಮಗಳು ಧನುಶ್ರೀ (19), ತಾಯಿ ಅನಿತಾ (43) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಗ ನಿತಿನ್ನಿಂದ ಈ ಕೃತ್ಯ ನಡೆದಿದೆ. ಸಹೋದರಿ ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಷಯ ಸಹೋದರನಿಗೆ ಗೊತ್ತಾಗಿ ತಿಳಿ ಹೇಳಿದ್ದನು. ಬಳಿಕ ಇಬ್ಬರ ನಡುವೆಯು ವೈಮನಸ್ಸು ಮೂಡಿತ್ತು. ಬಳಿಕ ತಂಗಿ ಮತ್ತು ತಾಯಿಯನ್ನು ಬೈಕ್ ಮೂಲಕ ಕೆರೆ ಬಳಿಗೆ ಕರೆದುಕೊಂಡು ಹೋಗಿದ್ದಾನೆ. ಆ ಬಳಿಕ ಮೊದಲು ಕೆರೆಯಲ್ಲಿ ತಂಗಿಯನ್ನು ತಳ್ಳಿದ್ದಾನೆ. ಇದರಿಂದ ಗಾಬರಿಗೊಂಡ ತಾಯಿ ತಕ್ಷಣ ಮಗಳನ್ನು ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ತಾಯಿಯನ್ನು ಕೂಡ ಕೆರೆಗೆ ತಳ್ಳಿದ್ದಾನೆ.
ಕೆರೆ ನೀರಿನಲ್ಲಿ ಬಿದ್ದ ತಾಯಿ, ಮಗಳು ಇಬ್ಬರು ಮೃತಪಟ್ಟಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನ ಹೊರ ತೆಗೆದಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…