Categories: ಇತರೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

“ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಿಗೆ ರಾಷ್ಟ್ರಮಟ್ಟದ ಶ್ರೇಷ್ಠ ಸಮ್ಮಾನ ಸಿಗುವಂತಾಗಲಿ” : ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ಬುಧವಾರ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಂಟರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಇದೇ ಸಂದರ್ಭದಲ್ಲಿ ಮಂಗಳೂರು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು ಅವರನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ಕೈಯಲ್ಲಿ ಹಣ ಇಲ್ಲದೆ ಇದ್ದಾಗಲೂ ಸಾಲ ಮಾಡಿಯಾದರೂ ನಮ್ಮ ಸಮಾಜದ ಜನರ ಕಣ್ಣೀರು ಒರೆಸುವ ಸಂಘ ಇದ್ದರೆ ಅದು ಬಂಟರ ಸಂಘಗಳ ಒಕ್ಕೂಟ ಮಾತ್ರ. ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಸಮಾಜದ ನೊಂದವರ ಕಣ್ಣೀರು ಒರೆಸುವ ಈ ಕಾರ್ಯ ಶ್ರೇಷ್ಠವಾದದ್ದು. ಮನುಷ್ಯ ಜನ್ಮ ಯಾವಾಗಲು ದೊಡ್ಡದು ನಮ್ಮ ಜೀವನ ನಿಂತ ನೀರಾಗಬಾರದು ಸದಾ ಹರಿಯುತ್ತ ಚಲನಶೀಲವಾಗಿರಬೇಕು. ಹೃದಯ ಶ್ರೀಮಂತಿಕೆಯ ಗುಣ ಇಂದು ಐಕಳ ಹರೀಶ್ ಶೆಟ್ಟಿ ಅವರಲ್ಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರಿಗೆ ರಾಷ್ಟ್ರಮಟ್ಟದ ಶ್ರೇಷ್ಠ ಸಮ್ಮಾನ ಮುಂದಿನ ದಿನಗಳಲ್ಲಿ ಸಿಗುವಂತಾಗಲಿ. ಹುಟ್ಟಿ ಸಾಯುವ ನಮ್ಮ ನಾಲ್ಕು ದಿನಗಳ ಈ ಜೀವನದಲ್ಲಿ ನಾವು ಆಗಾಗ ತಿರುಗಿ ನೋಡುತ್ತಿರಬೇಕು. ಆಗ ನಮಗಿಂತ ಬಡವರು, ಒಂದು ಹೊತ್ತಿನ ಊಟಕ್ಕೂ ಗತಿಯಿಲ್ಲದವರು ಕಾಣಸಿಗುತ್ತಾರೆ. ಅವರಿಗಿಂತ ನಮ್ಮ ಜೀವನ ಚೆನ್ನಾಗಿದೆ ಎಂದುಕೊಂಡರೆ ನಾವು ಖುಷಿಯಾಗಿರಲು ಸಾಧ್ಯ. ಬಡವರ ಸೇವೆಯನ್ನು ನಾವು ಮಾಡುತ್ತಾ ಬಂದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ. ನಾವು ಭೂಮಿ ಮೇಲಿರುವುದು ಬಾಡಿಗೆಗೆ ಬಂದಂತೆ. ಇಲ್ಲಿನ ಯಾವುದೂ ನಮ್ಮದಲ್ಲ, ಆದರೆ ಇರುವವರೆಗೆ ಬಳಸಿಕೊಳ್ಳಬಹುದು ಅಷ್ಟೇ” ಎಂದರು.

ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, “ಮೇಯರ್ ಸುಧೀರ್ ಶೆಟ್ಟಿ ಅವರು ಸಜ್ಜನ ರಾಜಕಾರಣಿ. ಅವರನ್ನು ಇಂದಿನ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಸನ್ಮಾನಿಸಿರುವುದು ವಿಶೇಷವಾಗಿದೆ. ನಮ್ಮ ಒಕ್ಕೂಟದಿಂದ ಸಹಾಯಧನ ಪಡೆದವರಿಗೆಲ್ಲರನ್ನೂ ದೇವರು ಹರಸಲಿ. ಎಲ್ಲರಿಗೂ ಒಳಿತಾಗಲಿ. ನೊಂದವರ ಜೊತೆ ಎಂದಿಗೂ ನಾವಿದ್ದೇವೆ. ನಿಮ್ಮ ಕಣ್ಣೀರು ಒರೆಸುವುದು ನನ್ನಿಂದ ಒಬ್ಬನಿಂದ ಸಾಧ್ಯವಿಲ್ಲ. ಅದಕ್ಕೆ ದಾನಿಗಳ ನೆರವು ಬೇಕು. ಹೀಗಾಗಿ ಸಹಾಯಹಸ್ತ ಚಾಚುವ ದಾನಿಗಳು ನಿಜವಾದ ದೇವರು. ಅವರೆಲ್ಲರಿಗೂ ದೇವರು ಆಯುಷ್ಯ ಅರೋಗ್ಯ ಕೊಡಲಿ. ಸಮಾಜದಲ್ಲಿ ಜಾಗತಿಕ ಬಂಟರ ಸಂಘ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೆ ನಿಮ್ಮೆಲ್ಲರ ಸೇವೆಯನ್ನು ಮಾಡುತ್ತದೆ. ನಮ್ಮ ಸಮಾಜ ಎಲ್ಲರನ್ನೂ ಪ್ರೀತಿಸುವ ಸಂಘಟನೆ. ಜನರನ್ನು ಜಾತಿಯ ಆಧಾರದಲ್ಲಿ ವಿಂಗಡಣೆ ಮಾಡದೇ ಅವರ ಸೇವೆ ನಿರಂತರವಾಗಿ ಮುಂದುವರಿಸಬೇಕು” ಎಂದರು.

ಕರ್ನಿರೆ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ “ಬಂಟ ಸಮಾಜದಲ್ಲಿಯೂ ಕಡು ಬಡತನದಿಂದ ದಿನದೂಡುತ್ತಿರುವ ಕುಟುಂಬಗಳಿವೆ. ದಿನದ ಒಂದು ಹೊತ್ತಿನ ಊಟಕ್ಕೂ ಪರದಾಡುವವರಿದ್ದಾರೆ. ಅವರನ್ನು ಕರೆದು ಸಮಸ್ಯೆ ಏನೆಂದು ತಿಳಿದು ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಐಕಳ ಹರೀಶ್ ಶೆಟ್ಟಿ ಅವರು ಸಂಘಟನೆಯ ಅಧ್ಯಕ್ಷರಾಗುವ ವೇಳೆ 100 ಮನೆಗಳನ್ನು ಬಡ ಬಂಟ ಸಮಾಜಕ್ಕೆ ಕಟ್ಟಿಕೊಡುವುದಾಗಿ ಹೇಳಿದ್ದರು. ಆದರೆ ಇಂದು 350ರಷ್ಟು ಮನೆಗಳನ್ನು ಕಟ್ಟಿಕೊಡಲಾಗಿದೆ. ಇನ್ನೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ನಮ್ಮ ಬಂಟ ಸಮಾಜ ಅಭಿವೃದ್ಧಿಯಾಗಬೇಕು” ಎಂದರು.
ಸಭೆಯಲ್ಲಿ ಫಲಾನುಭವಿಗಳಿಗೆ ದತ್ತಿನಿಧಿಯನ್ನು ವಿತರಿಸಲಾಯಿತು. ಒಕ್ಕೂಟದ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಬಂಟ್ವಾಳ ಧನ್ಯವಾದ ಸಮರ್ಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 hours ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

3 hours ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

3 hours ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

3 hours ago

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

1 day ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

4 days ago