ಉಡುಪಿ: ಕಾಂಗ್ರೆಸಿಗರು ಬಾಬರ್ ಮತ್ತು ಅವನ ಸಂತಾನವನ್ನು ಅಪ್ಪನಿಗಿಂತ ಜಾಸ್ತಿ ಹೊತ್ತುಕೊಂಡಿದ್ದಾರೆ. ಬಾಬರ್ ಸಂತಾನವನ್ನು ಪ್ರೀತಿಸಿದಷ್ಟು ಅವರ ಅಪ್ಪನನ್ನು ಪ್ರೀತಿಸುತ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ರಾಮ ಹುಟ್ಟಿದ ಜಾಗದಷ್ಟೇ ಕೃಷ್ಣನ ಮಥುರಾ ಕೂಡ ನಮಗೆ ಪವಿತ್ರ. ಜ್ಞಾನ ವ್ಯಾಪಿಯ ನಂದಿ ಕಾಶಿಯ ಪುನರುತ್ಥಾನಕ್ಕೆ ಕಾಯುತ್ತಿದ್ದಾನೆ. ನಮ್ಮ ಕ್ಷೇತ್ರಗಳನ್ನು ಬಿಟ್ಟು ಕೊಡಿ, ಸನಾತನಿಗಳ ವಿರುದ್ದ ಮಾಡಿದ ಪಾಪ ನೀವು ಹೊತ್ತುಕೊಳ್ಳಬೇಡಿ. ಮಾಡಿದ ತಪ್ಪನ್ನು ಪ್ರಾಯಶ್ಚಿತ ಮಾಡಲು ಅವಕಾಶ ಇದೆ ಎಂದರು.
ರಾಮಮಂದಿರ ಮೂಲಕ ಪರಕೀಯರ ಆಕ್ರಮಣದಿಂದ ಕಳೆದುಕೊಂಡ ಸಾಂಸ್ಕೃತಿಕ ಬೀಜಾಂಕುರ ಆಗಿದೆ. ಬಾಬರ್ ಮತ್ತು ಅವನ ಸಂತಾನ ಓಲೈಸುವವರಿಗೂ ವೋಟ್ ಬ್ಯಾಂಕ್ ರಾಜಕೀಯದ ಅನಿವಾರ್ಯತೆ ಉಂಟಾಗಿದೆ. ರಾಮನನ್ನು ಬಿಟ್ಟರೆ ರಾಷ್ಟ್ರ ಇಲ್ಲ, ವೋಟ್ ಇಲ್ಲ ಎನ್ನುವುದು ಗೊತ್ತಾಗಿದೆ.
ರಾಮ ಕಾಲ್ಪನಿಕ ಎಂದವರು ಕೂಡ ರಾಮನಾಮ ಜಪ ಆರಂಭಿಸಿದ್ದಾರೆ. ಅತಿಕ್ರಮಣಕಾರರನ್ನು ಬಿಟ್ಟು ರಾಮಕೃಷ್ಣ ಶಿವನ ಜೊತೆ ಮುಸಲ್ಮಾನರು ಗುರುತಿಸಿಕೊಳ್ಳುತ್ತಿದ್ದಾರೆ. ಮುಸಲ್ಮಾನರ ಪೂಜಾ ಪದ್ದತಿಯನ್ನು ನಾವು ಪ್ರಶ್ನೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 11 ದಿನ ಉಪವಾಸ ಮಾಡಿರೋದು ಡೌಟ್ ಎಂದಿರುವ ವೀರಪ್ಪ ಮೊಯ್ಲಿಗೆ ತೀಕ್ಷ್ಮವಾಗಿ ಕುಟುಕಿರುವ ರವಿ, ನಮಗೆ ವೀರಪ್ಪ ಮೊಯ್ಲಿಯ ಸರ್ಟಿಫಿಕೇಟ್ ಅವಶ್ಯಕತೆ ಇದೆಯಾ?. ರಾಮ ಕಾಲ್ಪನಿಕ ಎಂದು ಕಾಂಗ್ರೆಸಿಗರು ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದರು. ನಾನು ದೇವಸ್ಥಾನಕ್ಕೆ ಹೋಗಲ್ಲ, ಸಂವಿಧಾನ ಮುಖ್ಯ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಸಂವಿಧಾನ ನಮಗೂ ಮುಖ್ಯ.ಅದರ ಮೊದಲ ಪುಟದಲ್ಲೇ ರಾಮ ಇದ್ದಾನೆ ಎಂದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…