ಪುತ್ತೂರು: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಬಿಜೆಪಿಯಲ್ಲಿ ಹೊಸ ತಂಡಗಳು ರಚನೆಯಾಗಿದ್ದು, ಮುಂದಿನ ದಿನಗಳಲ್ಲಿ ಹಳೆಯ ತಂಡ ಮತ್ತು ಹೊಸ ತಂಡ ಜೊತೆಗೂಡಿ ಪಕ್ಷದ ಸಂಘಟನೆಯ ಕೆಲಸ ಮಾಡಲಿದೆ. ಪಕ್ಷದ ಕಾರ್ಯಕ್ರಮ, ಯೋಜನೆಗಗಳನ್ನು ಯಶಸ್ವಿಯಾಗಿ ಬೂತ್ ಮಟ್ಟದಿಂದ ಅನುಷ್ಠಾನಕ್ಕೆ ತರಲಿದ್ದೇವೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬೃಜೇಶ್ ಚೌಟ ಹೇಳಿದ್ದಾರೆ.
ಅವರು ಬಿಜೆಪಿ ರಾಜ್ಯ ಕಾರ್ಯದರ್ಶಿಯಾದ ಬಳಿಕ ಪ್ರಥಮ ಭಾರಿಗೆ ಬುಧವಾರ ಪುತ್ತೂರಿಗೆ ಭೇಟಿ ನೀಡಿದರು. ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು. ವಿಜಯೇಂದ್ರ ಅವರು ರಾಜ್ಯದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೊಸ ತಂಡ ರಚನೆಯಾಗಿದೆ. ಜಿಲ್ಲೆಯ ಅಧ್ಯಕ್ಷರ ಘೋಷಣೆಯೂ ಆಗಿದೆ. ತಿಂಗಳ ಅಂತ್ಯದೊಳಗೆ ಎಲ್ಲಾ ಮಂಡಲ, ಮೋರ್ಚಾಗಳ ತಂಡ ರಚನೆಯಾಗಲಿದೆ. ಬಳಿಕ ನಮ್ಮೆಲ್ಲರ ಗುರಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ಚುನಾಯಿತಗೊಳಿಸುವ ಗುರಿಯೊಂದೇ ಆಗಿದೆ. ಹೊಸ ತಂಡ ಮತ್ತು ಹಿಂದಿದ್ದ ತಂಡ ಜೊತೆಯಾಗಿ ಚುನಾವಣೆಯಲ್ಲಿ ಕೆಲಸ ಮಾಡಲಿದ್ದೇವೆ. ಹಾಗಾಗಿ ಎಲ್ಲರೂ ಸಂಕಲ್ಪ ಇಟ್ಟುಕೊಂಡು ಕೆಲಸವನ್ನು ಮುಂದಿನ ಎರಡು ಮೂರು ತಿಂಗಳು ಮಾಡಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಮತ್ತಿತರರು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…