ಜನ ಮನದ ನಾಡಿ ಮಿಡಿತ

Advertisement

ಕಲೆ ಎಲ್ಲರನ್ನು ಒಗ್ಗೂಡಿಸುವ ಮಾಧ್ಯಮ: ಜಯಂತ್ ಕಾಯ್ಕಿಣಿ

ಉಡುಪಿ: ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ವಿಶ್ವಪ್ರಭಾ ಪುರಸ್ಕಾರ ಪ್ರದಾನ ,ಕಲೆ ಎಲ್ಲರನ್ನು ಒಗ್ಗೂಡಿಸುವ ಮಾಧ್ಯಮ. ಅದು ಸಂಯುಕ್ತ ವಿಕಸನದ ಮಾರ್ಗ ಕೂಡ ಆಗಿದೆ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಹೇಳಿದರು.


ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುತ್ತಿರುವ ಸಂಸ್ಕೃತಿ ಉತ್ಸವದಲ್ಲಿ ಪ್ರಭಾವತಿ ಶ್ರೀ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ 2024’ ಅನ್ನು ಸ್ವೀಕರಿಸಿ ಮಾತನಾಡಿದರು.
ಇಂದು ನಾವು ವಿಚಿತ್ರವಾದ ಕಾಲಘಟ್ಟದಲ್ಲಿದ್ದೇವೆ. ಮನುಷ್ಯನ ಸ್ನೇಹ ಸಂಬಂಧ ಮೊಬೈಲ್ ಗೆ ಸೀಮಿತಗೊಂಡಿದೆ. ಬೆಳಿಗ್ಗೆ ಎದ್ದು ಗುಡ್ ಮಾರ್ನಿಂಗ್, ಶುಭಾಶಯಗಳನ್ನು ಕಳುಹಿಸುವವರು ಎದುರಿಗೆ ಸಿಕ್ಕರೂ ನೋಡಲ್ಲ, ನಗುವುದಿಲ್ಲ. ಇದೊಂದು ಮನುಷ್ಯನಿಗೆ ತಟ್ಟಿರುವ ಒಂದು ಶಾಪ ಎಂದರು.
ಸಾಹಿತಿ ನಾಡೋಜ ಪ್ರೊ ಕೆ.ಪಿ.ರಾವ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅಭಿನಂದನ ಭಾಷಣ ಮಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ, ಪ್ರಭಾ ಶೆಣ್ಯೆ ಉಪಸ್ಥಿತರಿದ್ದರು.
ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ನಾಗರಾಜ್ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ಶಿಲ್ಪಾ ಜೋಷಿ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!