ಉಡುಪಿ: ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ವಿಶ್ವಪ್ರಭಾ ಪುರಸ್ಕಾರ ಪ್ರದಾನ ,ಕಲೆ ಎಲ್ಲರನ್ನು ಒಗ್ಗೂಡಿಸುವ ಮಾಧ್ಯಮ. ಅದು ಸಂಯುಕ್ತ ವಿಕಸನದ ಮಾರ್ಗ ಕೂಡ ಆಗಿದೆ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಹೇಳಿದರು.
ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುತ್ತಿರುವ ಸಂಸ್ಕೃತಿ ಉತ್ಸವದಲ್ಲಿ ಪ್ರಭಾವತಿ ಶ್ರೀ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ 2024’ ಅನ್ನು ಸ್ವೀಕರಿಸಿ ಮಾತನಾಡಿದರು.
ಇಂದು ನಾವು ವಿಚಿತ್ರವಾದ ಕಾಲಘಟ್ಟದಲ್ಲಿದ್ದೇವೆ. ಮನುಷ್ಯನ ಸ್ನೇಹ ಸಂಬಂಧ ಮೊಬೈಲ್ ಗೆ ಸೀಮಿತಗೊಂಡಿದೆ. ಬೆಳಿಗ್ಗೆ ಎದ್ದು ಗುಡ್ ಮಾರ್ನಿಂಗ್, ಶುಭಾಶಯಗಳನ್ನು ಕಳುಹಿಸುವವರು ಎದುರಿಗೆ ಸಿಕ್ಕರೂ ನೋಡಲ್ಲ, ನಗುವುದಿಲ್ಲ. ಇದೊಂದು ಮನುಷ್ಯನಿಗೆ ತಟ್ಟಿರುವ ಒಂದು ಶಾಪ ಎಂದರು.
ಸಾಹಿತಿ ನಾಡೋಜ ಪ್ರೊ ಕೆ.ಪಿ.ರಾವ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅಭಿನಂದನ ಭಾಷಣ ಮಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ, ಪ್ರಭಾ ಶೆಣ್ಯೆ ಉಪಸ್ಥಿತರಿದ್ದರು.
ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ನಾಗರಾಜ್ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ಶಿಲ್ಪಾ ಜೋಷಿ ನಿರೂಪಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…