ಜನ ಮನದ ನಾಡಿ ಮಿಡಿತ

Advertisement

ಅಪರಿಚಿತ ವ್ಯಕ್ತಿಯೊರ್ವನ ಮೃತದೇಹದ ವಾರೀಸುದಾರರ ಗುರುತು ಪತ್ತೆಗಾಗಿ ಪೋಲೀಸ್ ಇಲಾಖೆ ಮಾಧ್ಯಮ ಮೂಲಕ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೊರ್ವನ ಮೃತದೇಹದ ವಾರೀಸುದಾರರ ಗುರುತು ಪತ್ತೆಗಾಗಿ ಪೋಲೀಸ್ ಇಲಾಖೆ ಮಾಧ್ಯಮ ಮೂಲಕ ಮನವಿ ಮಾಡಿದೆ.


ಬಂಟ್ವಾಳ ‌ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಆಸ್ಪತ್ರೆಯಲ್ಲಿ ಕೃಷ್ಣಪ್ಪ ಎಂಬವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆ ಗಾಗಿ ದಾಖಲಾಗಿದ್ದರು.
ಆದರೆ ವಿಪರೀತ ಅಸ್ವಸ್ಥಗೊಂಡಿದ್ದ ಇವರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಈತ ಜ.9 ರಂದು ಮೃತಪಟ್ಟ ಬಗ್ಗೆ ಅಲ್ಲಿನ ವೈದ್ಯರು ಪೋಲೀಸ್ ಇಲಾಖೆಗೆ ಮಾಹಿತಿ ನೀಡಿ ಶವಗಾರದಲ್ಲಿ ಇಡಲಾಗಿತ್ತು.
ಆದರೆ ಕೃಷ್ಣಪ್ಪ ಎಂದು ಹೆಸರು ಬಿಟ್ಟು ಯಾವುದೇ ವಿಳಾಸ ನೀಡದೆ ಆಸ್ಪತ್ರೆಗೆ ದಾಖಲಾದ ಕಾರಣ ಇವರ ಕುಟುಂಬದವರನ್ನು ಹುಡುಕುವುದು ಕಷ್ಟವಾಗಿದೆ.
ಹಾಗಾಗಿ ಇವರ ಗುರುತು ಪತ್ತೆಗಾಗಿ ಮಾಧ್ಯಮ ಮೂಲಕ ಮನವಿ ಮಾಡಿದೆ.
ಇವರ ಗುರುತು ಸಿಕ್ಕಿದರೆ ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕ ಮಾಡುವಂತೆ ಎಸ್. ಐ.ರಾಮಕೃಷ್ಣ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!