ಬಂಟ್ವಾಳ: ಅಪರಿಚಿತ ವ್ಯಕ್ತಿಯೊರ್ವನ ಮೃತದೇಹದ ವಾರೀಸುದಾರರ ಗುರುತು ಪತ್ತೆಗಾಗಿ ಪೋಲೀಸ್ ಇಲಾಖೆ ಮಾಧ್ಯಮ ಮೂಲಕ ಮನವಿ ಮಾಡಿದೆ.
ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಆಸ್ಪತ್ರೆಯಲ್ಲಿ ಕೃಷ್ಣಪ್ಪ ಎಂಬವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆ ಗಾಗಿ ದಾಖಲಾಗಿದ್ದರು.
ಆದರೆ ವಿಪರೀತ ಅಸ್ವಸ್ಥಗೊಂಡಿದ್ದ ಇವರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಈತ ಜ.9 ರಂದು ಮೃತಪಟ್ಟ ಬಗ್ಗೆ ಅಲ್ಲಿನ ವೈದ್ಯರು ಪೋಲೀಸ್ ಇಲಾಖೆಗೆ ಮಾಹಿತಿ ನೀಡಿ ಶವಗಾರದಲ್ಲಿ ಇಡಲಾಗಿತ್ತು.
ಆದರೆ ಕೃಷ್ಣಪ್ಪ ಎಂದು ಹೆಸರು ಬಿಟ್ಟು ಯಾವುದೇ ವಿಳಾಸ ನೀಡದೆ ಆಸ್ಪತ್ರೆಗೆ ದಾಖಲಾದ ಕಾರಣ ಇವರ ಕುಟುಂಬದವರನ್ನು ಹುಡುಕುವುದು ಕಷ್ಟವಾಗಿದೆ.
ಹಾಗಾಗಿ ಇವರ ಗುರುತು ಪತ್ತೆಗಾಗಿ ಮಾಧ್ಯಮ ಮೂಲಕ ಮನವಿ ಮಾಡಿದೆ.
ಇವರ ಗುರುತು ಸಿಕ್ಕಿದರೆ ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕ ಮಾಡುವಂತೆ ಎಸ್. ಐ.ರಾಮಕೃಷ್ಣ ಅವರು ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…