ಉಡುಪಿ: ಜಿಲ್ಲಾಡಳಿತ, ಜಿ. ಪಂ. ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ದೊಡ್ಡಣ್ಣಗುಡ್ಡೆಯಲ್ಲಿರುವ ತೋಟಗಾರಿಕೆ ಇಲಾಖೆ ಪುಷ್ಪ ಹರಾಜು ಕೇಂದ್ರದಲ್ಲಿ ಜನವರಿ28ರ ವರೆಗೆ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ರಚಿಸಿರುವ ಹೂಗಳ ಕಲಾಕೃತಿಗಳು ಸೌಂದರ್ಯ ಪ್ರಿಯರ ಕಣ್ಮನ ಸೆಳೆಯುತ್ತಿವೆ.
ಶುಕ್ರವಾರದಿಂದ ಆರಂಭಗೊಂಡ ಫಲಪುಷ್ಪ ಪ್ರದರ್ಶನದ ಮೊದಲ ದಿನವೇ ಸ್ಥಳೀಯ ಸಹಿತ ದೂರದ ಊರುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಹೂ, ಹೂವಿನ ಸಸ್ಯ, ಕಲಾಕೃತಿಗಳನ್ನು ಕಣ್ಣುಂಬಿಕೊಂಡರು.
5 ಸಾವಿರಕ್ಕೂ ಅಧಿಕ 30ಕ್ಕೂ ಅಧಿಕ ಜಾತಿಯ ಹೂವಿನ ಗಿಡಗಳಾದ ಪೆಟೂನಿಯ, ವರ್ಬೇನ, ಸ್ಯಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಚೈನಾ ಅಸ್ಟರ್ ಸೇರಿದಂತೆ ವಿವಿಧ ಜಾತಿಯ ಹೂವಿನ ಗಿಡಗಳು ಪಾತಿ, ಕುಂಡಗಳಲ್ಲಿ ಪ್ರದರ್ಶನದಲ್ಲಿವೆ. ರಾಗಿ ಮತ್ತು ಹೂವಿನಿಂದ ರೂಪಿಸಲಾದ ಅಯೋಧ್ಯೆ ರಾಮ ಮಂದಿರದ ಕಲಾಕೃತಿ ವಿಶೇಷ ಗಮನ ಸೆಳೆಯುತ್ತಿದೆ. ಇದರ ಜತೆಗೆ ನರ್ಸರಿ ಗಿಡಗಳು, ಕೃಷಿ ಸಂಬಂಧಿತ ಇಲಾಖೆಗಳಾದ ಕೃಷಿ, ಮೀನುಗಾರಿಕೆ, ತೋಟಗಾರಿಕೆ, ಪಶುಸಂಗೋಪನೆ, ಕೈಗಾರಿಕೆ ವಾಣಿಜ್ಯ ಇಲಾಖೆ ವಸ್ತು ಪ್ರದರ್ಶನ ಮಳಿಗೆಯೂ ಪ್ರಮುಖವಾಗಿದೆ.ಪ್ರದರ್ಶನ ವೀಕ್ಷಿಸಲು ನೂರಾರು ಜನ ಇಲ್ಲಿಗೆ ಆಗಮಿಸುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…