ದ.ಕ ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಕ್ರಿಕೆಟ್ ಪಂದ್ಯದಲ್ಲಿ ವಾರ್ತಾ ಭಾರತಿ ಪ್ರಥಮ, ಅಭಿಮತ ಟಿವಿ ದ್ವಿತೀಯ
ಮಂಗಳೂರು: ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಕ್ರಿಕೆಟ್ ಪಂದ್ಯಾಟದಲ್ಲಿ ವಾರ್ತಾಭಾರತಿ ಪ್ರಥಮ ಹಾಗೂ ಅಭಿಮತ ಟಿವಿ ದ್ವಿತೀಯ ಸ್ಥಾನ ಗಳಿಸಿದೆ.ನೆಹರು ಮೈದಾನದಲ್ಲಿ ಭಾನುವಾರ ನಡೆದಸಮಾರೋಪ ಸಮಾರಂಭದಲ್ಲಿ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ರೋಹನ್ ಕಾರ್ಪೊರೇಷನ್ ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಆಗಮಿಸಿ ಶುಭ ಹಾರೈಸಿದರು. ಬ್ರ್ಯಾಂಡ್ ಮಂಗಳೂರು ಹೆಸರಿನಲ್ಲಿ ಮಂಗಳೂರಿನ ಸಕಾರಾತ್ಮಕ ಬೆಳವಣಿಗೆಗೆ ಪತ್ರಕರ್ತರ ಕೊಡುಗೆ ಶ್ಲಾಘನೀಯ ಎಂದು ರೋಹನ್ ಮೊಂತೆರೊ ಹೇಳಿದರು.
ಈ ಸಂದರ್ಭ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ,ರಾಜೇಶ್ ಪೂಜಾರಿ,ಕಾರ್ಯ ಕ್ರಮ ಸಂಯೋಜಕರಾದ ವಿಲ್ಫೆಡ್ ಡಿ ಸೋಜ, ದಯಾ ಕುಕ್ಕಾಜೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ , ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ (ನಾ.ನಿ) ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಕಿಶನ್ ಮತ್ತು ಗಣೇಶ್ ನಿರೂಪಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…