ಇತರೆ

ನೆಲ್ಯಾಡಿ ಬದ್ರಿಯಾ ಜುಮಾ ಮಸ್ಜಿದ್‌ನಲ್ಲಿ ದಾಳಿಯಂತಹ ಘಟನೆ ನಡೆದಿಲ್ಲ – ಮುಹಮ್ಮದ್ ಹನೀಫ್ ಸಿಟಿ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ.

ಪುತ್ತೂರು: ನೆಲ್ಯಾಡಿ ಬದ್ರಿಯಾ ಜುಮಾ ಮಸ್ಜಿದ್‌ನಲ್ಲಿ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರ ಮೇಲೆ ಯಾರಿಂದಲೂ ದಾಳಿ ನಡೆದಿಲ್ಲ. ಮಸೀದಿಯ ಸಭಾಂಗಣದಲ್ಲಿ ನಡೆದ ಸಭೆಯ ಸಂದರ್ಭ ಉಂಟಾದ ಘಟನೆಯಲ್ಲಿ ಯಾವುದೇ ಪಕ್ಷ ಅಥವಾ ಸಂಘಟನೆಯ ಪಾತ್ರಿವಿಲ್ಲ. ಘಟನೆ ನಡೆದಿರುವುದು ಜಮಾಅತರು ಮತ್ತು ಉಸ್ಮಾನ್ ಜೌಹರಿ ಸಹೋದರರ ಮಧ್ಯೆ ಎಂದು ನೆಲ್ಯಾಡಿ ಬದ್ರಿಯಾ ಜುಮಾ ಮಸ್ಜಿದ್ ಅಧ್ಯಕ್ಷ ಮುಹಮ್ಮದ್ ಹನೀಫ್ ಸಿಟಿ ಸ್ಪಷ್ಟನೆ ನೀಡಿದ್ದಾರೆ.

ಅವರು ಪುತ್ತೂರಿನ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಮ್ಮ ಜುಮಾ ಮಸೀದಿಯ ಆವರಣದ ಒಳಗೆ ಯಾವುದೇ ಸಂಘ ಸಂಸ್ಥೆಗಳು ಮತ್ತು ಪಕ್ಷಗಳ ಚಟುವಟಿಕೆಗಳಿಗೆ ಅವಕಾಶವಿಲ್ಲ. ಉಸ್ಮಾನ್ ಜೌಹರಿ ನಮ್ಮ ಜಮಾಅತ್ ಸದಸ್ಯರಾಗಿದ್ದು, ಅವರ ಸಹೋದರರು ಬೇರೆ ಬೇರೆ ಊರುಗಳಲ್ಲಿ ವಾಸವಿರುವುದರಿಂದ ಅವರನ್ನು ಮಸಿದಿಯ ನಿಯಮಾನುಸಾರ ನಮಗೆ ಭೌಗೋಳಿಕವಾದ ವ್ಯಾಪ್ತಿಗೆ ಸಂಬAಧಿಸಿ ನಮ್ಮ ಜಮಾಅತ್ ಸದಸ್ಯತ್ವ ಕೊಡಲಾಗಿಲ್ಲ. ಈ ಮಧ್ಯೆ ಉಸ್ಮಾನ್ ಜೌಹರಿಯವರು ತಪ್ಪು ಸಂದೇಶ ನೀಡಿ ಜಮಾತಿಗರ ಸಭೆ ಕರೆಯುವಂತೆ ಖಾಝಿಯವರಿಗೆ ಒತ್ತಡ ಹಾಕಿದ್ದರಿಂದ ಖುದ್ದ ಖಾಝಿಯವರೇ ರದ್ದುಪಡಿಸಿದ್ದ ಮಂಗಳವಾರದ ಸಭೆಯನ್ನು ಬುಧವಾರಕ್ಕೆ ನಿಗದಿಪಡಿಸಿದ್ದರು.

ಹಾಗೆ ಬುಧವಾರ ನಡೆದ ಸಭೆಯಲ್ಲಿ ಉಸ್ಮಾನ್ ಜೌಹರಿ ಸಹೋದರರು ಗದ್ದಲ ಏರ್ಪಡಿಸಿದ್ದರು. ಈ ಕುರಿತು ಜೌಹರಿ ಮತ್ತು ೭ ಮಂದಿಯ ವಿರುದ್ಧ ದೂರು ನೀಡಿದ್ದೇವೆ. ಈ ಮಧ್ಯೆ ಖಾಝಿಯವರ ಮೇಲೆ ದಾಳಿ ಮಾಡಲಾಗಿದೆಯೆಂಬ ಸುಳ್ಳು ಮಾಹಿತಿಯನ್ನು ಕೆಲವರು ಸಾಮಾಜಕ ಜಾಲತಾಣದಲ್ಲಿ ಸಂಘಟನೆಯ ಮತ್ತು ಪಕ್ಷದ ವಿರುದ್ಧ ಹಬ್ಬಿಸುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಖಾಝಿಯವರ ಮೇಲೆ ದಾಳಿ ನಡೆದಿಲ್ಲ. ಘಟನೆಯು ಜಮಾಅತರು ಮತ್ತು ಉಸ್ಮಾನ್ ಜೌಹರಿ ಸಹೋದರರ ಮಧ್ಯೆ ಘಟನೆ ನಡೆದಿರುವುದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನೆಲ್ಯಾಡಿ ಬದ್ರಿಯಾ ಜುಮಾ ಮಸ್ಜಿದ್‌ನ ಉಪಾಧ್ಯಕ್ಷ ಎನ್.ಎಸ್.ಸುಲೈಮಾನ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಬೈಲು, ಕೋಶಾಧಿಕಾರಿ ಉಮ್ಮರ್, ಕಾರ್ಯದರ್ಶಿ ಸಿದ್ದಿಕ್ ನೆಲ್ಯಾಡಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

3 hours ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

8 hours ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

9 hours ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago