ಬಂಟ್ವಾಳ: ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಬಿ ಕೂಡಲಗಿ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ತಹಶೀಲ್ದಾರರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ಸೋಮವಾರ ಶಾಲು , ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಬಿ.ಸಿ. ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ತಹಶೀಲ್ದಾರ್ ಅರ್ಚನಾ ಭಟ್ ರವರು ಮಾತನಾಡಿ ಹೊಸತನ್ನು ಕಲಿಯುವ ಛಲ ಮತ್ತು ಧೈರ್ಯ ಇದ್ದರೆ ಯಾವುದೇ ಕರ್ತವ್ಯವನ್ನಾದರೂ ಸುಲಭವಾಗಿ ನಿರ್ವಹಿಸಬಹುದು. ತಾಲೂಕು ಆಡಳಿತದ ಯಶಸ್ಸಿಗೆ ಎಲ್ಲರೂ ಒಂದಾಗಿ ದುಡಿಯೋಣ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರು ಬಂಟ್ವಾಳ ತಾಲೂಕಿನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಅತ್ಯುತ್ತಮವಾದ ಸಹಕಾರ ನೀಡಿದ್ದರಿಂದಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು. ಬಂಟ್ವಾಳ ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ತಹಶೀಲ್ದಾರರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು,
ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ಧನ ಜೆ,
ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.
ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…