ಕಡಬ ಬರ್ಕತುಲ್ ಇಸ್ಲಾಂ ಮುಹಿಯುದ್ದೀನ್ ಕೇಂದ್ರ ಜುಮಾ ಮಸೀದಿಯಲ್ಲಿ ಫೆ. 2 ರಿಂದ 4 ರ ತನಕ ೩ ದಿನಗಳ ಉರೂಸ್ ಹಾಗೂ ಕಡಬ ತಾಲೂಕಿನ ವಿವಿಧ ಮಸೀದಿಗಳ ಸಹಕಾರದೊಂದಿಗೆ ಸೌಹಾರ್ದ ಸಮ್ಮೇಳನವು ನಡೆಯಲಿದೆ ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಅವರು ತಿಳಿಸಿದ್ದಾರೆ.
ಅವರು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಫೆ. ೨ ರಂದು ಮಧ್ಯಾಹ್ನ ೨ ಘಂಟೆಗೆ ಜಾವಗಲ್ನ ಜಾವಗಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಇಸಾಕ್ ಸಾಹೇಬ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಡಬ ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ರಾಜ್ಯ ಅಲ್ಪಸಂಖ್ಕಾರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ಅವರು ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ. ಮರ್ದಾಳದ ಸಯ್ಯದ್ ಹಬೀಬುಲ್ಲಾ ತಂಙಳ್ ದುವಾಶೀರ್ವಚನ ನೆರವೇರಿಸಲಿದ್ದಾರೆ. ಅಡ್ಡಗದ್ದೆ ಹನಫಿ ಜುಮಾ ಮಸೀದಿಯ ಇಮಾಮ್ ಹಝ್ರತ್ ಮೌಲಾನಾ ಫಯಾಝುಲ್ಖಾದ್ರಿ ಅವರು ಉದ್ಘಾಟನ ಭಾಷಣ ಮಾಡಲಿದ್ದಾರೆ. ಕೇರಳದ ಕುಟ್ಯಾಡಿ ರಾಶಿದ್ ಬುಖಾರಿ ಸಖಾಫಿ ಧಾರ್ಮಿಕ ಉಪನ್ಯಾಸ ನೀಡಲಿದ್ದು, ಕಡಬ ಕೇಂದ್ರ ಜುಮಾ ಮಸೀದಿಯ ಖತೀಮ್ ಅಬ್ದುಲ್ರಶೀದ್ ಸಹದಿ ಹಾಗೂ ಕೇಂದ್ರ ಜುಮಾ ಮಸೀದಿಯ ಉಪಾಧ್ಯಕ್ಷ ಆದಂ ಕುಂಡೋಳಿ ಉಪಸ್ಥಿತರಿರುತ್ತಾರೆ. ೩ ರಂದು ರಾತ್ರಿ ೮ ರಿಂದ ನಡೆಯುವ ಬೃಹತ್ ಬುರ್ದಾ ಮಜ್ಲಿಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ವಹಿಸಲಿದ್ದು, ಕರ್ನಾಟಕ ಮುಸ್ಲಿಂ ಜಮಾತ್ನ ಅಧ್ಯಕ್ಷ ಡಾ|ಮಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ದುವಾಶೀರ್ವಚನ ನೆರವೇರಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಧಾನ ಸಭಾ ಸಭಾಪತಿ ಯು.ಟಿ.ಖಾದರ್, ಪ್ರಮುಖರಾದ ಕೆ.ಎಂ.ಮುಸ್ತಫಾ, ಹಮಿದ್ ಕುತ್ತಮೊಟ್ಟೆ, ಎಸ್.ಶಂಶುದ್ದೀನ್, ಎಚ್.ಎ.ಆದಂ ಅವರು ಆಗಮಿಸಲಿದ್ದು, ಕೇರಳದ ಲದಲ್ ಹಬೀಬಿ ಬುರ್ದಾ ಇಕ್ವಾಲ್ ಮಲಪ್ಪುರಂ ನೇತೃತ್ವದಲ್ಲಿ ಹಝ್ರತ್ ರಝ ಖಾದಿರಿ ಬಿಜಾಪುರ ಹಾಗೂ ಮಹಮ್ಮದ್ ನಬೀರ್ ರಝ ಬರಕತಿ ಬೆಂಗಳೂರು ತಂಡದ ಸದಸ್ಯರು ಬುರ್ದಾ ಮಜ್ಲಿಸ್ ನಡೆಸಿಕೊಡಲಿದ್ದಾರೆ. ೪ ರಂದು ಸಂಜೆ ೬.೩೦ ರಿಂದ ನಡೆಯುವ ಸೌಹಾರ್ದ ಸಮ್ಮೇಳನದ ಸಲುವಾಗಿ ಕಡಬದಿಂದ ಕೇಂದ್ರ ಜುಮಾ ಮಸೀದಿ ತನಕ ಮೆರವಣಿಗೆ ನಡೆಯಲಿದೆ. ಕಡಬ ಕೇಂದ್ರ ರಹ್ಮಾನಿಯ ಟೌನ್ ಜುಮಾ ಮಸೀದಿಯ ಖತೀಬ್ ಹಾಜಿ ಇಬ್ರಾಹಿಂ ದಾರಿಮಿ ದುವಾಶೀರ್ವಚನದ ಮೂಲಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಯ್ಯದ್ ಮೀರಾ ಸಾಹೇಬ್ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಸಚಿವ ಜಮೀರ್ ಅಹ್ಮದ್, ಪ್ರಮುಖರಾದ ಡಾ|ಎ.ಜೆ.ಆಕ್ರಂ ಭಾಷ, ಸಯ್ಯದ್ ಹಮೀದ್ ತಂಙಳ್ ಮರ್ದಾಳ, ಇಕ್ಬಾಲ್ ಎಲಿಮಲೆ, ಡಾ|ಸಯ್ಯದ್ನಝೀರ್ ಸಾಹೇಬ್, ಅಬ್ದುಲ್ ಲತೀಫ್ ಹರ್ಲಡ್ಕ, ಜಲೀಲ್ ಬೈತಡ್ಕ ಮುಂತಾದವರು ಆಗಮಿಸಲಿದ್ದಾರೆ. ಕೇರಳದ ಮಶ್ಹೂರ್ ಮಲಕ್ಕೋಯ ತಂಙಳ್ ಪ್ರಧಾನ ಭಾಷಣ ಮಾಡಲಿದ್ದು, ಕೇರಳದ ಇಬ್ರಾಹಿಂ ಖಲೀಲುಲ್ ಬುಖಾರಿ ದುವಾಃ ನೆರವೇರಿಸಲಿದ್ದಾರೆ ಎಂದು ಮೀರಾ ಸಾಹೇಬ್ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಮಸೀದಿಯ ಮಹಮ್ಮದ್ ಶರೀಫ್ ಕೇಪು, ಉಪಾಧ್ಯಕ್ಷ ಆದಂ ಕುಂಡೋಳಿ, ಕಾರ್ಯದರ್ಶಿ ಫೈಝಲ್ ಎಸ್.ಇ.ಎಸ್., ಕೋಶಾಧಿಕಾರಿ ಇಕ್ಬಾಲ್ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…