ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಎಂಜಿಎಂ ಮೈದಾನದಲ್ಲಿ ವಿದ್ಯಾರ್ಥಿಗೆ ಚೂರಿ ಇರಿತ

ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಜ. 29ರಂದು ಮಧ್ಯಾಹ್ನ ನಡೆದಿದೆ.


ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಅಲ್ಲಿ ಸುಹಾಸ್ ಎಂಬಾತ ಪರಿಚಯವಾಗಿತ್ತು. ಪ್ರತೀಕ್ ಒಂದುವರೆ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಿದ್ದರು. ಇದನ್ನು ನೋಡಿದ ಸುಹಾಸ್ ನು ಹೊಟ್ಟೆ ಕಿಚ್ಚಿನಿಂದ ನೀನು ಈ ಬೈಕ್ ನ್ನು ಕದ್ದಿದ್ದೀಯಾ ಎಂದು ಹಿಯಾಲಿಸಿದ್ದನು. ಜ. 29ರಂದು ಮಧ್ಯಾಹ್ನ ವೇಳೆ ಪ್ರತೀಕ್ ಅವರು, ಎಂಜಿಎಂ ಮೈದಾನಕ್ಕೆ ಹೋದಾಗ ಅಲ್ಲಿದ್ದ ಆರೋಪಿಗಳಾದ ಸುಹಾಸ್, ಮೋನೀಶ್‌, ತರುಣ್ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಇನ್ನೋರ್ವ ಆರೋಪಿ ತರುಣ್ ಎಂಬಾತ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರತೀಕ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!