ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಜ. 29ರಂದು ಮಧ್ಯಾಹ್ನ ನಡೆದಿದೆ.
ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಅಲ್ಲಿ ಸುಹಾಸ್ ಎಂಬಾತ ಪರಿಚಯವಾಗಿತ್ತು. ಪ್ರತೀಕ್ ಒಂದುವರೆ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಿದ್ದರು. ಇದನ್ನು ನೋಡಿದ ಸುಹಾಸ್ ನು ಹೊಟ್ಟೆ ಕಿಚ್ಚಿನಿಂದ ನೀನು ಈ ಬೈಕ್ ನ್ನು ಕದ್ದಿದ್ದೀಯಾ ಎಂದು ಹಿಯಾಲಿಸಿದ್ದನು. ಜ. 29ರಂದು ಮಧ್ಯಾಹ್ನ ವೇಳೆ ಪ್ರತೀಕ್ ಅವರು, ಎಂಜಿಎಂ ಮೈದಾನಕ್ಕೆ ಹೋದಾಗ ಅಲ್ಲಿದ್ದ ಆರೋಪಿಗಳಾದ ಸುಹಾಸ್, ಮೋನೀಶ್, ತರುಣ್ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಇನ್ನೋರ್ವ ಆರೋಪಿ ತರುಣ್ ಎಂಬಾತ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರತೀಕ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…