ಜನ ಮನದ ನಾಡಿ ಮಿಡಿತ

Advertisement

ಹೋಟೆಲ್ ಉದ್ಯಮಿ ಕೃಷ್ಣ ಭಟ್ ತಿರುಪತಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ

ದಕ್ಷಿಣ ಕನ್ನಡ : ಹೋಟೆಲ್ ಉದ್ಯಮಿ ಕೃಷ್ಣ ಭಟ್ ತಿರುಪತಿ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಾವರಾಗಿದ್ದು, ಕರಾಡ ಬ್ರಾಹ್ಮಣ ಸಮಾಜದವರಾಗಿದ್ದು, ಹಲವಾರು ವರ್ಷಗಳ ಹಿಂದೆ ತಿರುಪತಿಗೆ ತೆರಳಿ ಅಲ್ಲಿ ಹೋಟೆಲ್ ಉದ್ಯಮವನ್ನು ಆರಂಭಿಸಿ, ಪ್ರಸ್ತುತ ಯಶಸ್ವಿ ಉದ್ಯಮಿ ಎನಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಉದ್ಯೋಗದಾತರಾಗಿದ್ದರು.


ಕರ್ನಾಟಕದಿಂದ ತಿರುಪತಿಗೆ ತೆರಳುವ ಅದೆಷ್ಟೋ ಯಾತ್ರಿಕರಿಗೆ ಮಾರ್ಗದರ್ಶನ ಸಹಕಾರ ಹಾಗೂ ವ್ಯವಸ್ತೆ ಮಾಡಿ ಎಲ್ಲರಲ್ಲೂ ತಿರುಪತಿ ಕೃಷ್ಣಣ್ಣ ಎನಿಸಿಕೊಂಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಆರ್ಥಿಕ ಸಹಾಯ ನೀಡಿ ಉಡುಗೈದಾನಿ ಎನಿಸಿಕೊಂಡಿದ್ದರು. ಸುಮಾರು 74 ವರ್ಷ ಪ್ರಾಯದ ಕೃಷ್ಣ ಭಟ್ ತಿರುಮಲ ಇವರು ಪತ್ನಿ ಹಾಗೂ ಎರಡು ಮಕ್ಕಳ ಕುಟುಂಬದ ತುಂಬು ಕುಟುಂಬದವರಾಗಿದ್ದು, ಅವಿಭಜಿತ ದಕ್ಷಿಣ ಕನ್ನಡದ ಕರಾಡ ಬ್ರಾಹ್ಮಣ ಸಮಾಜದ ಸಹಿತ ಕರ್ನಾಟಕ ಹಾಗೂ ಆಂಧ್ರದಲ್ಲಿ ಅಪಾರ ಸಂಖ್ಯೆಯ ಪ್ರೀತಿಪಾತ್ರರನ್ನು ಹೊಂದಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!