ದಕ್ಷಿಣ ಕನ್ನಡ : ಹೋಟೆಲ್ ಉದ್ಯಮಿ ಕೃಷ್ಣ ಭಟ್ ತಿರುಪತಿ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಾವರಾಗಿದ್ದು, ಕರಾಡ ಬ್ರಾಹ್ಮಣ ಸಮಾಜದವರಾಗಿದ್ದು, ಹಲವಾರು ವರ್ಷಗಳ ಹಿಂದೆ ತಿರುಪತಿಗೆ ತೆರಳಿ ಅಲ್ಲಿ ಹೋಟೆಲ್ ಉದ್ಯಮವನ್ನು ಆರಂಭಿಸಿ, ಪ್ರಸ್ತುತ ಯಶಸ್ವಿ ಉದ್ಯಮಿ ಎನಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಉದ್ಯೋಗದಾತರಾಗಿದ್ದರು.
ಕರ್ನಾಟಕದಿಂದ ತಿರುಪತಿಗೆ ತೆರಳುವ ಅದೆಷ್ಟೋ ಯಾತ್ರಿಕರಿಗೆ ಮಾರ್ಗದರ್ಶನ ಸಹಕಾರ ಹಾಗೂ ವ್ಯವಸ್ತೆ ಮಾಡಿ ಎಲ್ಲರಲ್ಲೂ ತಿರುಪತಿ ಕೃಷ್ಣಣ್ಣ ಎನಿಸಿಕೊಂಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಆರ್ಥಿಕ ಸಹಾಯ ನೀಡಿ ಉಡುಗೈದಾನಿ ಎನಿಸಿಕೊಂಡಿದ್ದರು. ಸುಮಾರು 74 ವರ್ಷ ಪ್ರಾಯದ ಕೃಷ್ಣ ಭಟ್ ತಿರುಮಲ ಇವರು ಪತ್ನಿ ಹಾಗೂ ಎರಡು ಮಕ್ಕಳ ಕುಟುಂಬದ ತುಂಬು ಕುಟುಂಬದವರಾಗಿದ್ದು, ಅವಿಭಜಿತ ದಕ್ಷಿಣ ಕನ್ನಡದ ಕರಾಡ ಬ್ರಾಹ್ಮಣ ಸಮಾಜದ ಸಹಿತ ಕರ್ನಾಟಕ ಹಾಗೂ ಆಂಧ್ರದಲ್ಲಿ ಅಪಾರ ಸಂಖ್ಯೆಯ ಪ್ರೀತಿಪಾತ್ರರನ್ನು ಹೊಂದಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…