ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿರುವ ಪಿಡಬ್ಲುಡಿ ಇಇ ಹರ್ಷ ಹಾಗೂ ಅವರ ಮಾವ ಕಷ್ಣೇಗೌಡರ ಮನೆಗೆ ಲೋಕಾಯುಕ್ತ ಆಧಿಕಾರಿಗಳು ದಾಳಿ ನಡೆಸಿ ದೊಡ್ಡ ಪ್ರಮಾಣದ ಚಿನ್ನಾಭರಣ, ನಗದನ್ನು ವಶಕ್ಕೆ ಪಡೆದಿದ್ದಾರೆ. 350 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ, 1.5 ಲಕ್ಷ ನಗದು ಸೀಜ್ ಮಾಡಲಾಗಿದೆ. ಇದೇ ವೇಳೆ 20 ವಿದೇಶಿ ನೋಟು ಪತ್ತೆಯಾಗಿದೆ.
ಅಕ್ರಮ ಆಸ್ತಿ ಹಿನ್ನೆಲೆ ಹರ್ಷ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹರ್ಷ ಅವರ ಮಾವ ಕಷ್ಣೇಗೌಡ ಮನೆಯಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ.
ಈ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಮಂಡ್ಯದ ಪಿಡಬ್ಲುಡಿ ಕಚೇರಿ, ಕ್ವಾಟರ್ಸ್, ಮಂಡ್ಯದ ಕಲ್ಲಹಳ್ಳಿಯಲ್ಲಿರುವ ತಂದೆ ಮನೆ, ಬೆಂಗಳೂರಿನ ನಿವಾಸ ಸೇರಿ 6 ಕಡೆ ಒಂದೇ ಸಮಯದಲ್ಲಿ ದಾಳಿ ನಡೆಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…