ಮುಲ್ಕಿ:ಬೆಂಗಳೂರಿನ ಅಂತಾರಾಷ್ಟ್ರೀಯ ವಾಸ್ತು ತಜ್ಞ,ಆಧ್ಯಾತ್ಮಿಕ ಗುರು, ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ರವರು ಫೆ. 3ರಂದು ಮಂಗಳೂರಿಗೆ ಪತ್ನಿ ಸಮೇತ ಆಗಮಿಸಲಿದ್ದು ಕಿನ್ನಿಗೋಳಿ ಸಮೀಪದ ಇತಿಹಾಸ ಪ್ರಸಿದ್ಧ ಐಕಳ ಕಾಂತಾ ಬಾರೆ ಬೂತಾ ಬಾರೆ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ಐಕಳ ಬಾವ ಡಾ. ದೇವಿ ಪ್ರಸಾದ್ ಶೆಟ್ಟಿ,ಬೆಳಪು ತಿಳಿಸಿದ್ದಾರೆ
ಅವರು ಮಾಧ್ಯಮದ ಜೊತೆ ಮಾತನಾಡಿ ಐಕಳಬಾವಾ ಕಂಬಳಕ್ಕೆ ಕಳೆದ ಹಲವು ದಶಕಗಳಿಂದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಚಾಲನೆ ನೀಡಿ, ವಿಶೇಷವಾಗಿ ಆಶೀರ್ವದಿಸಿಕೊಂಡು ಬರುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಕಂಬಳವೂ ಹೆಚ್ಚೆಚ್ಚು ಜನಪ್ರಿಯತೆ ಪಡೆದುಕೊಂಡು ಬರುತ್ತಿದೆ,
ಮೂಲತಃ ಮುಲ್ಕಿಯ ನಿವಾಸಿಯಾಗಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ದೇಶ ವಿದೇಶಗಳಲ್ಲಿ ಅಂತಾರಾಷ್ಟ್ರಿಯ ವಾಸ್ತು ಸಲಹೆಗಾರರಾಗಿ, ವೈಜ್ಞಾನಿಕ. ಜ್ಯೋತಿಷಿಯಾಗಿ
, ಆಧ್ಯಾತ್ಮಿಕ ಗುರುವಾಗಿ ಖ್ಯಾತಿ ಪಡೆದಿದ್ದಾರೆ. ಆದರೆ ಪ್ರತಿ ವರ್ಷ ಸುಮಾರು ಐಕಳ ಕಂಬಳಕ್ಕೆ ಚಾಲನೆ ನೀಡಲು ಕರಾವಳಿಗೆ ಬರುತ್ತಿರುವುದು ಅವರಿಗೆ ಕಂಬಳದ ಮೇಲಿರುವ ಪ್ರೀತಿಯ ಪ್ರತೀಕವಾಗಿದೆ.
ಸ್ವಾಮೀಜಿ ರವರು, ಕಂಬಳದ ಮಾರ್ಗದರ್ಶಕರಾಗಿದ್ದು, ಕರಾವಳಿ ಭಾಗದ ಸಾಂಪ್ರದಾಯಿಕ ಹಾಗೂ ಗ್ರಾಮೀಣ ಕ್ರೀಡೆಯಾದ ಕಂಬಳವನ್ನು ನಿರಂತರವಾಗಿ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ ಎಂದರು.
ಕಂಬಳೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಸ್ವಾಮೀಜಿ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೊಂದು ಪುಣ್ಯ ಕ್ಷೇತ್ರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮತ್ತೆ ಸಂಜೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಬೆಳಪು ಡಾ! ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…