ಮುಲ್ಕಿ:ಬೆಂಗಳೂರಿನ ಅಂತಾರಾಷ್ಟ್ರೀಯ ವಾಸ್ತು ತಜ್ಞ,ಆಧ್ಯಾತ್ಮಿಕ ಗುರು, ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ರವರು ಫೆ. 3ರಂದು ಮಂಗಳೂರಿಗೆ ಪತ್ನಿ ಸಮೇತ ಆಗಮಿಸಲಿದ್ದು ಕಿನ್ನಿಗೋಳಿ ಸಮೀಪದ ಇತಿಹಾಸ ಪ್ರಸಿದ್ಧ ಐಕಳ ಕಾಂತಾ ಬಾರೆ ಬೂತಾ ಬಾರೆ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ಐಕಳ ಬಾವ ಡಾ. ದೇವಿ ಪ್ರಸಾದ್ ಶೆಟ್ಟಿ,ಬೆಳಪು ತಿಳಿಸಿದ್ದಾರೆ
ಅವರು ಮಾಧ್ಯಮದ ಜೊತೆ ಮಾತನಾಡಿ ಐಕಳಬಾವಾ ಕಂಬಳಕ್ಕೆ ಕಳೆದ ಹಲವು ದಶಕಗಳಿಂದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಚಾಲನೆ ನೀಡಿ, ವಿಶೇಷವಾಗಿ ಆಶೀರ್ವದಿಸಿಕೊಂಡು ಬರುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಕಂಬಳವೂ ಹೆಚ್ಚೆಚ್ಚು ಜನಪ್ರಿಯತೆ ಪಡೆದುಕೊಂಡು ಬರುತ್ತಿದೆ,
ಮೂಲತಃ ಮುಲ್ಕಿಯ ನಿವಾಸಿಯಾಗಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ದೇಶ ವಿದೇಶಗಳಲ್ಲಿ ಅಂತಾರಾಷ್ಟ್ರಿಯ ವಾಸ್ತು ಸಲಹೆಗಾರರಾಗಿ, ವೈಜ್ಞಾನಿಕ. ಜ್ಯೋತಿಷಿಯಾಗಿ
, ಆಧ್ಯಾತ್ಮಿಕ ಗುರುವಾಗಿ ಖ್ಯಾತಿ ಪಡೆದಿದ್ದಾರೆ. ಆದರೆ ಪ್ರತಿ ವರ್ಷ ಸುಮಾರು ಐಕಳ ಕಂಬಳಕ್ಕೆ ಚಾಲನೆ ನೀಡಲು ಕರಾವಳಿಗೆ ಬರುತ್ತಿರುವುದು ಅವರಿಗೆ ಕಂಬಳದ ಮೇಲಿರುವ ಪ್ರೀತಿಯ ಪ್ರತೀಕವಾಗಿದೆ.
ಸ್ವಾಮೀಜಿ ರವರು, ಕಂಬಳದ ಮಾರ್ಗದರ್ಶಕರಾಗಿದ್ದು, ಕರಾವಳಿ ಭಾಗದ ಸಾಂಪ್ರದಾಯಿಕ ಹಾಗೂ ಗ್ರಾಮೀಣ ಕ್ರೀಡೆಯಾದ ಕಂಬಳವನ್ನು ನಿರಂತರವಾಗಿ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ ಎಂದರು.
ಕಂಬಳೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಸ್ವಾಮೀಜಿ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೊಂದು ಪುಣ್ಯ ಕ್ಷೇತ್ರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮತ್ತೆ ಸಂಜೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಬೆಳಪು ಡಾ! ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…