ಜನ ಮನದ ನಾಡಿ ಮಿಡಿತ

Advertisement

ನಿವೃತ್ತಿ ಹೊಂದಿ ಫೆ. ೩ ರಂದು ಹುಟ್ಟೂರಿಗೆ ಆಗಮಿಸುತ್ತಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ ೩೩ ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್

ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ ೩೩ ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್. ನಿವೃತ್ತಿ ಹೊಂದಿ ಫೆ. ೩ ರಂದು ಹುಟ್ಟೂರಿಗೆ ಆಗಮಿಸುತ್ತಿದ್ದಾರೆ.


ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ದಿ. ಮಹಾಲಿಂಗ ಪಾಟಾಳಿ ಮತ್ತು ಗಿರಿಜಾ ದಂಪತಿ ಪುತ್ರನಾದ ವಿದ್ಯಾಧರ ಎನ್. ಅವರು ಪ್ರಾಥಮಿಕ ಶಿಕ್ಷಣವನ್ನು ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢಶಿಕ್ಷಣವನ್ನು ಶ್ರೀ ಪಂಚಲಿAಗೇಶ್ವರ ಪ್ರೌಢಶಾಲೆ ಈಶ್ವರನುಂಗಲದಲ್ಲಿ ಪಡೆದಿರುತ್ತಾರೆ. ಅನಂತರ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದು, ೧೯೯೦ ರ ಡಿಸೆಂಬರ್‌ನಲ್ಲಿ ಕೇಂದ್ರೀಯ ಮೀಸಲು ಪೋಲಿಸ್ ಸೇನಾ ಪಡೆಗೆ ಸೇರ್ಪಡೆಗೊಂಡಿದ್ದರು.


ರಾಜಸ್ಥಾನದ ಅಜ್ಮೀರ್ ಮತ್ತು ಉತ್ತರ ಪ್ರದೇಶದ ಆಲಿಗಡ್‌ನಲ್ಲಿ ಬೇಸಿಕ್ ಟ್ರೈನಿಂಗ್ ಮುಗಿಸಿದ ನಂತರ ಪಂಜಾಬ್, ಚಂಡೀಗಢ, ಜಮ್ಮು ಕಾಶ್ಮೀರ, ದೆಹಲಿ, ಅಸ್ಲಾಂ, ಆಂಧ್ರಪ್ರದೇಶ, ನಾಗಪುರ್ (ಮಹಾರಾಷ್ಟ್ರ), ಬೆಂಗಳೂರು, ಕೊಯಮುತ್ತೂರು, ವಿಜಯನಾಡ ಮತ್ತು ಛತ್ತೀಸ್‌ಗಡ್‌ಗಳಲ್ಲಿ ೩೩ ವರ್ಷಗಳ ಕಾಲ ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಅತೀ ಉತ್ಕೃಷ್ಟ ಸೇವಾ ಪದಕ ಪ್ರಶಸ್ತಿಪಡೆದಿರುತ್ತಾರೆ.


ಫೆ.೩ ರಂದು ಪಟ್ಟೆಯ ಮನೆಯಲ್ಲಿ ಅವರಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇವರ ಸಹೋದರರಾದ ಸುಬ್ಬಪ್ಪ ಪಾಟಲಿ ಭಾರತೀಯ ಸೇನೆ ಹಾಗೂ ಇನ್ನೊರ್ವ ಸಹೋದರ ಸಿ. ಆರ್. ಪಿ. ಎಫ್. ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!