ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ ೩೩ ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್. ನಿವೃತ್ತಿ ಹೊಂದಿ ಫೆ. ೩ ರಂದು ಹುಟ್ಟೂರಿಗೆ ಆಗಮಿಸುತ್ತಿದ್ದಾರೆ.
ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ದಿ. ಮಹಾಲಿಂಗ ಪಾಟಾಳಿ ಮತ್ತು ಗಿರಿಜಾ ದಂಪತಿ ಪುತ್ರನಾದ ವಿದ್ಯಾಧರ ಎನ್. ಅವರು ಪ್ರಾಥಮಿಕ ಶಿಕ್ಷಣವನ್ನು ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢಶಿಕ್ಷಣವನ್ನು ಶ್ರೀ ಪಂಚಲಿAಗೇಶ್ವರ ಪ್ರೌಢಶಾಲೆ ಈಶ್ವರನುಂಗಲದಲ್ಲಿ ಪಡೆದಿರುತ್ತಾರೆ. ಅನಂತರ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದು, ೧೯೯೦ ರ ಡಿಸೆಂಬರ್ನಲ್ಲಿ ಕೇಂದ್ರೀಯ ಮೀಸಲು ಪೋಲಿಸ್ ಸೇನಾ ಪಡೆಗೆ ಸೇರ್ಪಡೆಗೊಂಡಿದ್ದರು.
ರಾಜಸ್ಥಾನದ ಅಜ್ಮೀರ್ ಮತ್ತು ಉತ್ತರ ಪ್ರದೇಶದ ಆಲಿಗಡ್ನಲ್ಲಿ ಬೇಸಿಕ್ ಟ್ರೈನಿಂಗ್ ಮುಗಿಸಿದ ನಂತರ ಪಂಜಾಬ್, ಚಂಡೀಗಢ, ಜಮ್ಮು ಕಾಶ್ಮೀರ, ದೆಹಲಿ, ಅಸ್ಲಾಂ, ಆಂಧ್ರಪ್ರದೇಶ, ನಾಗಪುರ್ (ಮಹಾರಾಷ್ಟ್ರ), ಬೆಂಗಳೂರು, ಕೊಯಮುತ್ತೂರು, ವಿಜಯನಾಡ ಮತ್ತು ಛತ್ತೀಸ್ಗಡ್ಗಳಲ್ಲಿ ೩೩ ವರ್ಷಗಳ ಕಾಲ ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಅತೀ ಉತ್ಕೃಷ್ಟ ಸೇವಾ ಪದಕ ಪ್ರಶಸ್ತಿಪಡೆದಿರುತ್ತಾರೆ.
ಫೆ.೩ ರಂದು ಪಟ್ಟೆಯ ಮನೆಯಲ್ಲಿ ಅವರಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇವರ ಸಹೋದರರಾದ ಸುಬ್ಬಪ್ಪ ಪಾಟಲಿ ಭಾರತೀಯ ಸೇನೆ ಹಾಗೂ ಇನ್ನೊರ್ವ ಸಹೋದರ ಸಿ. ಆರ್. ಪಿ. ಎಫ್. ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…