ನರೇಗಾ ದಿವಸದ ಅಂಗವಾಗಿ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿಯಲ್ಲಿ ರೋಜ್ಗಾರ್ ದಿನಾಚರಣೆ ನಡೆಯಿತು.
ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ. ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅರ್ಜಿ ಸಲ್ಲಿಸಿ ಗ್ರಾಮದ ಅರ್ಹ ಫಲಾನುಭವಿಗಳು ಕಾಮಗಾರಿ ಕೈಗೊಳ್ಳಬೇಕು. ವರ್ಷದಲ್ಲಿ 100 ದಿನಗಳನ್ನು ಪೂರೈಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಗ್ರಾಮ ಪಂಚಾಯತ್ ಕಾರ್ಯಕ್ರಮ, ಸಭೆಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾದಂತೆ ಸರ್ಕಾರದ ಯೋಜನೆ ಮಾಹಿತಿಯನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ನರೇಗಾ ತಾಲೂಕು ಐಇಸಿ ಸಂಯೋಜಕ ರಾಜೇಶ್ ಮಾತನಾಡಿ, ನರೇಗಾ ಯೋಜನೆಯ ಆರಂಭ ಹಾಗೂ ಗ್ರಾಮಸ್ಥರು ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ತಿಳಿಸಿದರು. ಅಮೃತ ಆರೋಗ್ಯ ತಾಲೂಕು ಸಂಯೋಜಕರಾದ ಅಲ್ಲಾಭಕ್ಷ್, ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವುದು, ಅದರಿಂದ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು. ಇದೇ ವೇಳೆ 2023-24ನೇ ಸಾಲಿನಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಂಡು 100 ಮಾನವದಿನಗಳನ್ನು ಪೂರೈಸಿದ ಫಲಾನುಭವಿ ಮಾಲತಿ ಅವರಿಗೆ ಸಸಿ ವಿತರಿಸಲಾಯಿತು. ” ಹಸಿರೇ ಉಸಿರು” ಧ್ಯೇಯದಡಿ ಗ್ರಾಮ ಆವರಣದಲ್ಲಿ ಗಿಡ ನೆಡಲಾಯಿತು. ಗ್ರಾಪಂ ಉಪಾಧ್ಯಕ್ಷೆ ಸಂಧ್ಯಾ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಶಿಕಲಾ, ಪುರಂದರಗೌಡ ಹಾಗೂ ಗ್ರಾಪಂ ಸಿಬ್ಬಂದಿ ಕುಶಾಲ್, ಲಿಂಗಪ್ಪ ಟಿ., ಹರಿಣಾಕ್ಷಿ, ಸೇವಂತಿಕ ರೈ, ಮಮತಾ, ಸಂಜೀವಿನಿ ಒಕ್ಕೂಟದ ಎಂಬಿಕೆ ಪ್ರೇಮಲತಾ ಹಾಗೂ ಗ್ರಾಮಸ್ಥರು, ಭಾಗವಹಿಸಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…