ನರೇಗಾ ದಿವಸದ ಅಂಗವಾಗಿ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿಯಲ್ಲಿ ರೋಜ್ಗಾರ್ ದಿನಾಚರಣೆ ನಡೆಯಿತು.
ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ. ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅರ್ಜಿ ಸಲ್ಲಿಸಿ ಗ್ರಾಮದ ಅರ್ಹ ಫಲಾನುಭವಿಗಳು ಕಾಮಗಾರಿ ಕೈಗೊಳ್ಳಬೇಕು. ವರ್ಷದಲ್ಲಿ 100 ದಿನಗಳನ್ನು ಪೂರೈಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಗ್ರಾಮ ಪಂಚಾಯತ್ ಕಾರ್ಯಕ್ರಮ, ಸಭೆಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾದಂತೆ ಸರ್ಕಾರದ ಯೋಜನೆ ಮಾಹಿತಿಯನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ನರೇಗಾ ತಾಲೂಕು ಐಇಸಿ ಸಂಯೋಜಕ ರಾಜೇಶ್ ಮಾತನಾಡಿ, ನರೇಗಾ ಯೋಜನೆಯ ಆರಂಭ ಹಾಗೂ ಗ್ರಾಮಸ್ಥರು ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ತಿಳಿಸಿದರು. ಅಮೃತ ಆರೋಗ್ಯ ತಾಲೂಕು ಸಂಯೋಜಕರಾದ ಅಲ್ಲಾಭಕ್ಷ್, ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವುದು, ಅದರಿಂದ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು. ಇದೇ ವೇಳೆ 2023-24ನೇ ಸಾಲಿನಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಂಡು 100 ಮಾನವದಿನಗಳನ್ನು ಪೂರೈಸಿದ ಫಲಾನುಭವಿ ಮಾಲತಿ ಅವರಿಗೆ ಸಸಿ ವಿತರಿಸಲಾಯಿತು. ” ಹಸಿರೇ ಉಸಿರು” ಧ್ಯೇಯದಡಿ ಗ್ರಾಮ ಆವರಣದಲ್ಲಿ ಗಿಡ ನೆಡಲಾಯಿತು. ಗ್ರಾಪಂ ಉಪಾಧ್ಯಕ್ಷೆ ಸಂಧ್ಯಾ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಶಿಕಲಾ, ಪುರಂದರಗೌಡ ಹಾಗೂ ಗ್ರಾಪಂ ಸಿಬ್ಬಂದಿ ಕುಶಾಲ್, ಲಿಂಗಪ್ಪ ಟಿ., ಹರಿಣಾಕ್ಷಿ, ಸೇವಂತಿಕ ರೈ, ಮಮತಾ, ಸಂಜೀವಿನಿ ಒಕ್ಕೂಟದ ಎಂಬಿಕೆ ಪ್ರೇಮಲತಾ ಹಾಗೂ ಗ್ರಾಮಸ್ಥರು, ಭಾಗವಹಿಸಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…